ಬಿಜೆಪಿ-ಕಾಂಗ್ರೆಸ್ ಚಿಹ್ನೆ  online desk
ರಾಜಕೀಯ

ಸಿ.ಟಿ ರವಿ ಬಿಡುಗಡೆ: ಸರ್ಕಾರದ ದಬ್ಬಾಳಿಕೆಗೆ ಕೋರ್ಟ್ ಮಂಗಳಾರತಿ ಎತ್ತಿದೆ, ಪ್ರಜಾಪ್ರಭುತ್ವ ಗೆದ್ದಿದೆ- BJP

ರಾಜ್ಯ ಉಚ್ಛ ನ್ಯಾಯಾಲಯ ಕಾಂಗ್ರೆಸ್ ಸರ್ಕಾರದ ಪೊಲೀಸ್ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ. ಪ್ರಜಾಪ್ರಭುತ್ವ ಗೆದ್ದಿದೆ, ಸಿಟಿ ರವಿ ಬಿಡುಗಡೆಗೆ ಆದೇಶ ಹೊರಡಿಸಿದೆ.

ಬೆಂಗಳೂರು: ಸಿ.ಟಿ.ರವಿ ಬಿಡುಗಡೆಗೆ ರಾಜ್ಯ ಉಚ್ಛ ನ್ಯಾಯಾಲಯ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಸರ್ಕಾರದ ಪೊಲೀಸ್ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ. ಪ್ರಜಾಪ್ರಭುತ್ವ ಗೆದ್ದಿದೆ ಎಂದು ಬಿಜೆಪಿ ಹೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರ ಪರಿಷತ್‌ ಶಾಸಕ ಸಿಟಿ ರವಿ ಅವರ ಮೇಲೆ ನಡೆಸಿದ್ದ ಷಡ್ಯಂತ್ರಕ್ಕೆ ಹಿನ್ನಡೆಯಾಗಿದೆ. ಸಿ.ಟಿ.ರವಿಯವರನ್ನು ಅಕ್ರಮವಾಗಿ ಬಂಧಿಸಿದ್ದು ಅತ್ಯಂತ ತಪ್ಪು ನಿರ್ಧಾರವಾಗಿದ್ದು, ತತಕ್ಷಣವಾಗಿ ಅವರನ್ನು ಬಿಡುಗೊಡೆಗೊಳಿಸಿ ಎಂದು ಹೈಕೋರ್ಟ್‌ ಆದೇಶ ನೀಡಿರುವುದು ಅತ್ಯಂತ ಸ್ವಾಗತಾರ್ಹ. ಸಿಎಂ ಸಿದ್ದರಾಮಯ್ಯಸ, ಡಿಸಿಎಂ ಡಿಕೆ.ಶಿವಕುಮಾರ್ ಅವರೆ, ನಿಮ್ಮ ಕುತಂತ್ರಗಳಿಗೆ ಹೈಕೋರ್ಟ್‌ ಕಪಾಳಮೋಕ್ಷ ಮಾಡಿದೆ. ವಿಪಕ್ಷ ನಾಯಕರುಗಳ ಮೇಲಿನ ನಿಮ್ಮ ದ್ವೇಷ ಹಾಗೂ ಷಡ್ಯಂತ್ರದ ರಾಜಕಾರಣದ ಪಾಪದ ಕೊಡ ತುಂಬಿದ್ದು, ಕರ್ನಾಟಕದ ಜನತೆ ನಿಮ್ಮ ಸೊಕ್ಕಿನ ಆಡಳಿತಕ್ಕೆ ತಕ್ಕ ಪಾಠ ಕಲಿಸುವುದು ಖಚಿತ-ನಿಶ್ಚಿತ-ಖಂಡಿತ ಎಂದು ಹೇಳಿದೆ.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪೋಸ್ಟ್ ಮಾಡಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಉಚ್ಛ ನ್ಯಾಯಾಲಯ ಕಾಂಗ್ರೆಸ್ ಸರ್ಕಾರದ ಪೊಲೀಸ್ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ. ಪ್ರಜಾಪ್ರಭುತ್ವ ಗೆದ್ದಿದೆ, ಸಿಟಿ ರವಿ ಬಿಡುಗಡೆಗೆ ಆದೇಶ ಹೊರಡಿಸಿದೆ. ಜನಪ್ರತಿನಿಧಿಗಳು ಎಂಬುದನ್ನೂ ಲೆಕ್ಕಿಸದೇ ನೀತಿ-ನಿಯಮಗಳನ್ನು ಮೀರಿ ಪೊಲೀಸ್ ಬಲ ಬಳಸಿಕೊಂಡು, ಸರ್ವಾಧಿಕಾರಿ ಆಡಳಿತ ನೆನಪಿಸುವ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ. ನಿನ್ನೆಯಿಂದ ಇಂದಿನವರೆಗೂ ಮಾನ್ಯ ಸಿ. ಟಿ. ರವಿ ಅವರನ್ನು ನಿಯಮ ಮೀರಿ ಬಂಧಿಸುವ ಮೂಲಕ ತುರ್ತು ಪರಿಸ್ಥಿತಿಯ ಕರಾಳತೆಯನ್ನು ಕಾಂಗ್ರೆಸ್ ಸರ್ಕಾರ ಇಂದಿನ ಪೀಳಿಗೆಗೆ ನೆನಪು ಮಾಡಿಕೊಟ್ಟಿದೆ.

ಗೂಂಡಾಗಳನ್ನು ಪೋಷಿಸಿಕೊಂಡು ಸರ್ಕಾರ ನಡೆಸುವುದು, ಪೊಲೀಸರನ್ನು ಬಳಸಿಕೊಂಡು ಯಾರನ್ನು ಬೇಕಾದರೂ ಬಂಧಿಸುತ್ತೇವೆಂದು ದ್ವೇಷ ಸಾರಲು ಹೊರಟಿದ್ದ ಈ ಸರ್ಕಾರಕ್ಕೆ ಪಾಠ ಹೇಳುವ ರೀತಿಯಲ್ಲಿ ಉಚ್ಚ ನ್ಯಾಯಾಲಯ ಸಕಾಲದಲ್ಲಿ ಮದ್ಯ ಪ್ರವೇಶಿಸಿ ಸಂವಿಧಾನ ಹಾಗೂ ಈ ನೆಲದ ಕಾನೂನಿನ ಘನತೆಯನ್ನು ತಿಳಿಸಿಕೊಟ್ಟಿದೆ. ನ್ಯಾಯಾಲಯದ ಈ ತೀರ್ಪನ್ನು ಕರ್ನಾಟಕದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸಿ, ಶಾಸಕ ಸಿ.ಟಿ ರವಿಯವರನ್ನು ಅಭಿನಂದಿಸುತ್ತೇನೆ.

ಪ್ರಜಾಪ್ರಭುತ್ವ ದಮನಮಾಡಿ ದಬ್ಬಾಳಿಕೆ, ಕ್ರೌರ್ಯ ತುಂಬಿಕೊಂಡ ವರ್ತನೆಗಳು ಹಾಗೂ ಭ್ರಷ್ಟಾಚಾರದ ಹಗರಣಗಳನ್ನು ಮೈಗೆ ಮೆತ್ತಿಕೊಂಡಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ತಾರ್ಕಿಕ ಅಂತ್ಯ ಕಾಣುವವರೆಗೂ ಬಿಜೆಪಿ ವಿರಮಿಸದೇ ತನ್ನ ಹೋರಾಟ ಮುನುವರೆಸಲಿದೆ. ಪ್ರಜಾಪ್ರಭುತ್ವ ದೇಗುಲದಲ್ಲಿ ನಡೆದ ಪರಮ ದೌರ್ಜನ್ಯದ ಈ ಘಟನೆಯನ್ನು, ದೇಶದ ಗಮನ ಸೆಳೆಯುವಂತೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಪರಿಣಾಮಕಾರಿ ಪಾತ್ರ ವಹಿಸಿದ ಮಾಧ್ಯಮಗಳನ್ನು ಈ ಸಂದರ್ಭದಲ್ಲಿ ಮನಃ ಪೂರ್ವಕವಾಗಿ ಅಭಿನಂದಿಸುವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT