ಡಿಸಿಎಂ ಡಿಕೆ ಶಿವಕುಮಾರ್ PRINT
ರಾಜಕೀಯ

ರಾಜ್ಯದಲ್ಲಿ ಏನೇ ಆದರೂ ನಾನೇ ಕಾರಣನಾ? ನನ್ನ ನೆನಸಿಕೊಂಡಿಲ್ಲ ಅಂದ್ರೆ ಅವರಿಗೆ ನಿದ್ದೆ ಬರಲ್ಲ!

ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಕ್ಷೇಪಾರ್ಹ ಪದಬಳಕೆ ಮಾಡಿದ್ದಾರೆ ಎಂಬ ದೂರಿನ ಪ್ರಕರಣದಲ್ಲಿ ಎಂಎಲ್‌ಸಿ ಸಿ.ಟಿ.ರವಿಗೆ ಜಾಮೀನು ಸಿಕ್ಕಿರುವ ವಿಚಾರವಾಗಿ ಡಿಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

ಬೆಂಗಳೂರು: ರಾಜ್ಯದಲ್ಲಿ ಏನೇ ಆದರೂ ನಾನೇ ಕಾರಣನಾ? ಬಿಜೆಪಿಯವರ ಮನೆಯಲ್ಲಿ, ಪಕ್ಷದಲ್ಲಿ ಅಷ್ಟೇ ಯಾಕೆ, ಅವರ ಹೊಟ್ಟೆ ಒಳಗೆ ಏನಾದ್ರೂ ನಾನೇ ಕಾರಣನಾ? ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಕ್ಷೇಪಾರ್ಹ ಪದಬಳಕೆ ಮಾಡಿದ್ದಾರೆ ಎಂಬ ದೂರಿನ ಪ್ರಕರಣದಲ್ಲಿ ಎಂಎಲ್‌ಸಿ ಸಿ.ಟಿ.ರವಿಗೆ ಜಾಮೀನು ಸಿಕ್ಕಿರುವ ವಿಚಾರವಾಗಿ ಡಿಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

ಅವರ ಪಕ್ಷ, ಅವರ ಮುಖಂಡರ ಸಂಸ್ಕ್ರತಿ ಏನು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಪೊಲೀಸ್ ಉಂಟು, ಕೋರ್ಟ್ ಉಂಟು, ಅಪರಾದ ಉಂಟು. ರಾಜ್ಯದಲ್ಲಿ ಏನೇ ಆದರೂ ನಾನೇ ಕಾರಣ, ಅವರ ಪಕ್ಷ, ಹೊರಗಡೆ, ಮನೆ, ಹೊಟ್ಟೆ ಒಳಗೆ ಏನಾದ್ರೂ ಎಲ್ಲದಕ್ಕೂ ನಾನೇ ಕಾರಣ. ನನ್ನ ನೆನಸಿಕೊಂಡಿಲ್ಲ ಅಂದ್ರೆ ಅವರಿಗೆ ನಿದ್ದೆ ಬರಲ್ಲ ಎಂದು ಕುಟುಕಿದರು.

ಕಾನೂನಿಗೆ, ಕೋರ್ಟ್‌ಗೆ ಏನು ಗೌರವ ಕೊಡಬೇಕೊ ಕೊಡುತ್ತೇವೆ. ಕೋರ್ಟ್ ಏನು ಬೇಕೋ ನಿರ್ಧಾರ ತೆಗೆದುಕೊಳ್ಳುತ್ತೆ. ಮೊದಲು ಅವರು ಮಾತನಾಡಿದ್ದು ಸರೀನಾ ಎಂದು ಕೇಳಿ? ಅವರ ಭಾಷೆ, ಸಂಸ್ಕ್ರತಿಯಿಂದ ಹರುಕು ಬಾಯಿ ಎನ್ನುವುದು ಗೊತ್ತಾಗಿದೆ. ಈ ಹಿಂದೆ ಜಯಮಾಲಾಗೂ ಮಾತಾಡಿದ್ರು, ಸಿಎಂ ಬಗ್ಗೆನೂ ಮಾತನಾಡಿದ್ರು, ನಿತ್ಯ ಸುಮಂಗಲಿ ಅಂತ ಹೇಳಿದ್ರು, ಇದು ಸರಿನಾ, ತಪ್ಪಾ? ಎಂದು ಪ್ರಶ್ನಿಸಿದರು.

ನನಗೂ ಅವರ ಮೇಲೆ ಸಿಂಪತಿ ಇತ್ತು. ಚಿಕ್ಕಮಗಳೂರು ಜನ ಎಂದರೆ ಒಳ್ಳೆ ಜನ, ಸಂಸ್ಕೃತಿಯುಳ್ಳ ಜನ ಎಂದು. ಆದರೆ, ಆ ಪಾರ್ಟಿಯಲ್ಲಿ ಇರುವವರು ಹೆಣ್ಣು ಮಕ್ಕಳ ಬಗ್ಗೆ ಸರಿಯಾ ಅಂತ ಅರ್ಥ ಮಾಡಿಕೊಳ್ಳಬೇಕು. ಆತ್ಮ ಸಾಕ್ಷಿ ಇರುವುದು ಮುಖ್ಯ ಆಗುತ್ತೆ. ಪಕ್ಷದ ನಾಯಕನೆಂದು ಸುಮ್ಮನೆ ಬೆಂಬಲ ನೀಡುವುದಲ್ಲ. ಅದನ್ನ ಖಂಡಿಸಬೇಕಲ್ವಾ..? ಸರಿ ಇಲ್ಲ ಅಂತ ಹೇಳಬೇಕಲ್ವಾ? ನನ್ನ ಪಕ್ಷದಲ್ಲಿ ಮಾತನಾಡಿದ್ದರೆ ನಾನು ಖಂಡಿಸುತ್ತಿದ್ದೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT