ಜಗದೀಶ್ ಶೆಟ್ಟರ್ 
ರಾಜಕೀಯ

1924 ಬೆಳಗಾವಿ ಅಧಿವೇಶನದ ಶತಮಾನೋತ್ಸವ ಸಮಾರಂಭ: ತೆರಿಗೆದಾರರ ಹಣದಲ್ಲಿ 'ನಕಲಿ ಗಾಂಧಿ'ಗಳ ಸಮಾವೇಶ- ಶೆಟ್ಟರ್

ಮಹಾತ್ಮ ಗಾಂಧಿ ಅವರನ್ನು ಗೌರವಿಸಲು ಉದ್ದೇಶಿಸಲಾಗಿದ್ದ ಈ ಕಾರ್ಯಕ್ರಮವು ಪಕ್ಷದ ಸಾಧನೆಗಳನ್ನು ಪ್ರದರ್ಶಿಸುವ 'ನಕಲಿ ಗಾಂಧಿ'ಗಳ ಸಭೆಯಾಗಿ ಮಾರ್ಪಾಡಾಗಿದೆ.

ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಭಾಗವಹಿಸಿದ್ದ ಐತಿಹಾಸಿಕ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭವನ್ನು ರಾಜ್ಯದ ತೆರಿಗೆದಾರರ ಹಣದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಈ ಸಂದರ್ಭವನ್ನು ತನ್ನ ಪಕ್ಷದ ಪ್ರಚಾರಕ್ಕಾಗಿ ದುರುಪಯೋಗಪಡಿಸಿಕೊಂಡಿದೆ. "ಸ್ವಾತಂತ್ರ್ಯ ಪೂರ್ವದ ಭಾರತದ ಕಾಂಗ್ರೆಸ್‌ಗಿಂತ ಇಂದಿನ ಕಾಂಗ್ರೆಸ್‌ ಬಹಳ ಭಿನ್ನವಾಗಿದೆ. ಮಹಾತ್ಮ ಗಾಂಧಿ ಅವರನ್ನು ಗೌರವಿಸಲು ಉದ್ದೇಶಿಸಲಾಗಿದ್ದ ಈ ಕಾರ್ಯಕ್ರಮವು ಪಕ್ಷದ ಸಾಧನೆಗಳನ್ನು ಪ್ರದರ್ಶಿಸುವ 'ನಕಲಿ ಗಾಂಧಿ'ಗಳ ಸಭೆಯಾಗಿ ಮಾರ್ಪಾಡಾಗಿದೆ ಎಂದು ಶೆಟ್ಟರ್ ಆರೋಪಿಸಿದರು.

ಬಿಜೆಪಿ ಶಾಸಕ ಅಭಯ ಪಾಟೀಲ ಮಾತನಾಡಿ, ಮಹಾತ್ಮಾ ಗಾಂಧಿಯವರ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ 250 ಕೋಟಿ ಮತ್ತು ರಾಜ್ಯ ಸರ್ಕಾರದಿಂದ ರೂ. 500 ಕೋಟಿಗೆ ಮನವಿ ಸೇರಿದಂತೆ ಶತಮಾನೋತ್ಸವದ ಅಧಿವೇಶನದ ಅದ್ಧೂರಿ ಆಚರಣೆಯನ್ನು ಈ ಹಿಂದೆ ಪ್ರಸ್ತಾಪಿಸಿದ್ದೆ. ಆ ಸಮಯದಲ್ಲಿ ಕಾಂಗ್ರೆಸ್ ಯಾವುದೇ ಆಸಕ್ತಿ ತೋರಿಸಲಿಲ್ಲ, ಈಗ ಸ್ಥಳೀಯ ಶಾಸಕರು ಮತ್ತು ಸಂಸದರನ್ನು ಹೊರಗಿಟ್ಟು ಇದನ್ನು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿದ್ದಾರೆ ಎಂದು ಟೀಕಿಸಿದರು.

ಶಿಷ್ಟಾಚಾರ ಉಲ್ಲಂಘನೆ ಉಲ್ಲೇಖಿಸಿ ಗೋಲ್ಡನ್ ಟೆಂಪಲ್ ಬಳಿಯ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಬಿಜೆಪಿ ಬಹಿಷ್ಕರಿಸಿದೆ. ಸ್ಥಳೀಯ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ವರದಿಯಾಗಿದೆ.

ರಾಜ್ಯ ಸರ್ಕಾರ ಶತಮಾನೋತ್ಸವ ಕಾರ್ಯಕ್ರಮಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿಲ್ಲ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲು ವಿಫಲವಾಗಿದೆ. ಇದು ತೆರಿಗೆದಾರರ ಕೋಟಿಗಟ್ಟಲೆ ಹಣವನ್ನು ಬಳಸಿಕೊಂಡು ಸರ್ಕಾರಿ ಕಾರ್ಯಕ್ರಮವನ್ನು ಪಕ್ಷದ ಪ್ರಚಾರವನ್ನಾಗಿ ಪರಿವರ್ತಿಸುವ ಉದ್ದೇಶವನ್ನು ಬಿಂಬಿಸುತ್ತದೆ ಎಂದು ಪಾಟೀಲ್ ಆರೋಪಿಸಿದ್ದಾರೆ. ಐತಿಹಾಸಿಕ ಮಹತ್ವವನ್ನು ಬದಿಗಿಟ್ಟು ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಸರ್ಕಾರ ಸಾರ್ವಜನಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT