ಬಿ.ವೈ. ವಿಜಯೇಂದ್ರ 
ರಾಜಕೀಯ

ಬ್ಯಾನರ್‌ ಗಳಲ್ಲಿ POK ಒಳಗೊಳ್ಳದ ಭಾರತದ ನಕ್ಷೆ : ರಾಷ್ಟ್ರದ್ರೋಹ-ಗಾಂಧಿದ್ರೋಹ ಎಸೆಗಿರುವ ಕಾಂಗ್ರೆಸ್ ಕೂಡಲೇ ಕ್ಷಮೆಯಾಚಿಸಬೇಕು- ವಿಜಯೇಂದ್ರ

ಸ್ವಾತಂತ್ರ್ಯಕ್ಕಾಗಿ ಅಸ್ತಿತ್ವಕಂಡು ಕೊಂಡಿದ್ದ ಅಂದಿನ ಕಾಂಗ್ರೆಸ್ ಅನ್ನು ರಾಜಕೀಯ ಅಧಿಕಾರಕ್ಕಾಗಿ ಅಪೋಶನ ಮಾಡಿಕೊಂಡ ಕುಟುಂಬದ ಮುಷ್ಟಿಯಲ್ಲಿರುವ ಇಂದಿನ ಕಾಂಗ್ರೆಸ್, ಇಂದು ನಡೆಸುತ್ತಿರುವ ಬೆಳಗಾವಿ ಸಮಾವೇಶದ ಶತಮಾನದ ನೆನಪು ಕೇವಲ ರಾಜಕೀಯ ಹಿತಾಸಕ್ತಿಗಾಗಿ ಎಂಬುದು ದೇಶದ ಜನತೆಗೆ ತಿಳಿದಿದೆ.

ಬೆಂಗಳೂರು: ಭಾರತದ ಭೂಪಟಕ್ಕೆ ಅಪಚಾರವೆಸಗಿ ಕಾಶ್ಮೀರವಿಲ್ಲದ ಭಾರತದ ಭೂಪಟವನ್ನು ಪ್ರದರ್ಶಿಸುವ ಮೂಲಕ ರಾಷ್ಟ್ರದ್ರೋಹ, ಗಾಂಧಿದ್ರೋಹ ಎರಡನ್ನು ಎಸೆಗಿರುವ ಕಾಂಗ್ರೆಸಿಗರು ಈ ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು ಗುರುವಾರ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಳಗಾವಿಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಿಒಕೆ ಒಳಗೊಳ್ಳದ ಭಾರತದ ನಕ್ಷೆ ಬ್ಯಾನರ್‌ ಹಾಕಿರುವ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಅಸ್ತಿತ್ವಕಂಡು ಕೊಂಡಿದ್ದ ಅಂದಿನ ಕಾಂಗ್ರೆಸ್ ಅನ್ನು ರಾಜಕೀಯ ಅಧಿಕಾರಕ್ಕಾಗಿ ಅಪೋಶನ ಮಾಡಿಕೊಂಡ ಕುಟುಂಬದ ಮುಷ್ಟಿಯಲ್ಲಿರುವ ಇಂದಿನ ಕಾಂಗ್ರೆಸ್, ಇಂದು ನಡೆಸುತ್ತಿರುವ ಬೆಳಗಾವಿ ಸಮಾವೇಶದ ಶತಮಾನದ ನೆನಪು ಕೇವಲ ರಾಜಕೀಯ ಹಿತಾಸಕ್ತಿಗಾಗಿ ಎಂಬುದು ದೇಶದ ಜನತೆಗೆ ತಿಳಿದಿದೆ.

ಭಾರತದ ಕಿರೀಟ ಕಾಶ್ಮೀರಕ್ಕೆ ಕತ್ತರಿ ಪ್ರಯೋಗಿಸಿ ಮಹಾತ್ಮನನ್ನು ಸ್ಮರಿಸಲು ಹೊರಟಿರುವುದು ಮಹಾತ್ಮನ ಆತ್ಮಕ್ಕೆ ಇರಿದಂತೆ ಅಲ್ಲವೇ? ಅಖಂಡ ಭಾರತದ ಅಸ್ತಿತ್ವ ಹಾಗೂ ರಾಷ್ಟ್ರ ವಿಭಜನೆಯನ್ನು ತಡೆಯಲು ಕಡೇ ಕ್ಷಣದವರೆಗೂ ಪ್ರಯತ್ನಿಸಿದ ಗಾಂಧಿಯವರನ್ನು ಅಪಮಾನಿಸಲು ಹೊರಟಿರುವ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನದ ನೆನಪಿನ ಕಾರ್ಯಕ್ರಮ, ದೇಶಪ್ರೇಮವನ್ನು ಮೆರೆಯಲೋ, ಅಥವಾ ರಾಷ್ಟ್ರವಿದ್ರೋಹಿ ಶಕ್ತಿಗಳನ್ನು ಓಲೈಸಲೋ? ಅಥವಾ ನಿಮ್ಮ ಮಿತ್ರರಾದ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಓಲೈಕೆಗೋ ಎನ್ನುವುದನ್ನು ಕಾಂಗ್ರೆಸ್ಸಿಗರು ಸ್ಪಷ್ಟಪಡಿಸಬೇಕು. ಭಾರತದ ಭೂಪಟಕ್ಕೆ ಅಪಚಾರವೆಸಗಿ ಕಾಶ್ಮೀರವಿಲ್ಲದ ಭಾರತದ ಭೂಪಟವನ್ನು ಪ್ರದರ್ಶಿಸುವ ಮೂಲಕ ರಾಷ್ಟ್ರದ್ರೋಹ, ಗಾಂಧಿದ್ರೋಹ ಎರಡನ್ನು ಎಸೆಗಿರುವ ಕಾಂಗ್ರೆಸಿಗರು ಈ ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel