ಬಿ.ವೈ. ವಿಜಯೇಂದ್ರ 
ರಾಜಕೀಯ

ಬ್ಯಾನರ್‌ ಗಳಲ್ಲಿ POK ಒಳಗೊಳ್ಳದ ಭಾರತದ ನಕ್ಷೆ : ರಾಷ್ಟ್ರದ್ರೋಹ-ಗಾಂಧಿದ್ರೋಹ ಎಸೆಗಿರುವ ಕಾಂಗ್ರೆಸ್ ಕೂಡಲೇ ಕ್ಷಮೆಯಾಚಿಸಬೇಕು- ವಿಜಯೇಂದ್ರ

ಸ್ವಾತಂತ್ರ್ಯಕ್ಕಾಗಿ ಅಸ್ತಿತ್ವಕಂಡು ಕೊಂಡಿದ್ದ ಅಂದಿನ ಕಾಂಗ್ರೆಸ್ ಅನ್ನು ರಾಜಕೀಯ ಅಧಿಕಾರಕ್ಕಾಗಿ ಅಪೋಶನ ಮಾಡಿಕೊಂಡ ಕುಟುಂಬದ ಮುಷ್ಟಿಯಲ್ಲಿರುವ ಇಂದಿನ ಕಾಂಗ್ರೆಸ್, ಇಂದು ನಡೆಸುತ್ತಿರುವ ಬೆಳಗಾವಿ ಸಮಾವೇಶದ ಶತಮಾನದ ನೆನಪು ಕೇವಲ ರಾಜಕೀಯ ಹಿತಾಸಕ್ತಿಗಾಗಿ ಎಂಬುದು ದೇಶದ ಜನತೆಗೆ ತಿಳಿದಿದೆ.

ಬೆಂಗಳೂರು: ಭಾರತದ ಭೂಪಟಕ್ಕೆ ಅಪಚಾರವೆಸಗಿ ಕಾಶ್ಮೀರವಿಲ್ಲದ ಭಾರತದ ಭೂಪಟವನ್ನು ಪ್ರದರ್ಶಿಸುವ ಮೂಲಕ ರಾಷ್ಟ್ರದ್ರೋಹ, ಗಾಂಧಿದ್ರೋಹ ಎರಡನ್ನು ಎಸೆಗಿರುವ ಕಾಂಗ್ರೆಸಿಗರು ಈ ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು ಗುರುವಾರ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಳಗಾವಿಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಿಒಕೆ ಒಳಗೊಳ್ಳದ ಭಾರತದ ನಕ್ಷೆ ಬ್ಯಾನರ್‌ ಹಾಕಿರುವ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಅಸ್ತಿತ್ವಕಂಡು ಕೊಂಡಿದ್ದ ಅಂದಿನ ಕಾಂಗ್ರೆಸ್ ಅನ್ನು ರಾಜಕೀಯ ಅಧಿಕಾರಕ್ಕಾಗಿ ಅಪೋಶನ ಮಾಡಿಕೊಂಡ ಕುಟುಂಬದ ಮುಷ್ಟಿಯಲ್ಲಿರುವ ಇಂದಿನ ಕಾಂಗ್ರೆಸ್, ಇಂದು ನಡೆಸುತ್ತಿರುವ ಬೆಳಗಾವಿ ಸಮಾವೇಶದ ಶತಮಾನದ ನೆನಪು ಕೇವಲ ರಾಜಕೀಯ ಹಿತಾಸಕ್ತಿಗಾಗಿ ಎಂಬುದು ದೇಶದ ಜನತೆಗೆ ತಿಳಿದಿದೆ.

ಭಾರತದ ಕಿರೀಟ ಕಾಶ್ಮೀರಕ್ಕೆ ಕತ್ತರಿ ಪ್ರಯೋಗಿಸಿ ಮಹಾತ್ಮನನ್ನು ಸ್ಮರಿಸಲು ಹೊರಟಿರುವುದು ಮಹಾತ್ಮನ ಆತ್ಮಕ್ಕೆ ಇರಿದಂತೆ ಅಲ್ಲವೇ? ಅಖಂಡ ಭಾರತದ ಅಸ್ತಿತ್ವ ಹಾಗೂ ರಾಷ್ಟ್ರ ವಿಭಜನೆಯನ್ನು ತಡೆಯಲು ಕಡೇ ಕ್ಷಣದವರೆಗೂ ಪ್ರಯತ್ನಿಸಿದ ಗಾಂಧಿಯವರನ್ನು ಅಪಮಾನಿಸಲು ಹೊರಟಿರುವ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನದ ನೆನಪಿನ ಕಾರ್ಯಕ್ರಮ, ದೇಶಪ್ರೇಮವನ್ನು ಮೆರೆಯಲೋ, ಅಥವಾ ರಾಷ್ಟ್ರವಿದ್ರೋಹಿ ಶಕ್ತಿಗಳನ್ನು ಓಲೈಸಲೋ? ಅಥವಾ ನಿಮ್ಮ ಮಿತ್ರರಾದ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಓಲೈಕೆಗೋ ಎನ್ನುವುದನ್ನು ಕಾಂಗ್ರೆಸ್ಸಿಗರು ಸ್ಪಷ್ಟಪಡಿಸಬೇಕು. ಭಾರತದ ಭೂಪಟಕ್ಕೆ ಅಪಚಾರವೆಸಗಿ ಕಾಶ್ಮೀರವಿಲ್ಲದ ಭಾರತದ ಭೂಪಟವನ್ನು ಪ್ರದರ್ಶಿಸುವ ಮೂಲಕ ರಾಷ್ಟ್ರದ್ರೋಹ, ಗಾಂಧಿದ್ರೋಹ ಎರಡನ್ನು ಎಸೆಗಿರುವ ಕಾಂಗ್ರೆಸಿಗರು ಈ ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT