ಆರ್. ಅಶೋಕ್ 
ರಾಜಕೀಯ

ಕಾಂಗ್ರೆಸ್ ನಲ್ಲಿ ನಕಲಿ ಗಾಂಧಿಗಳು ಮಾತ್ರ ನಾಯಕರು- ಮಿಕ್ಕವರು ಗುಲಾಮರು: ಸಿದ್ದರಾಮಯ್ಯರನ್ನು ಹೇಗೆ ನಡೆಸಿಕೊಳ್ಳಲಿದೆ ಎಂಬುದರ ಟ್ರೈಲರ್!

ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ ಬಂದಾಗಲೆಲ್ಲಾ ಅದನ್ನು ನಿಭಾಯಿಸಿ 'ಟ್ರಬಲ್ ಶೂಟರ್' ಎಂದೇ ಖ್ಯಾತರಾಗಿದ್ದ ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ನಿಧನರಾದಾಗ ಕಾಂಗ್ರೆಸ್ ಪಕ್ಷ ಒಂದು ಶ್ರದ್ಧಾಂಜಲಿ ಸಭೆ ಕೂಡ ನಡೆಸಲಿಲ್ಲ.

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಸಾವಿನಲ್ಲೂ ರಾಜಕೀಯ ಮಾಡಿ ಮೊಸಳೆ ಕಣ್ಣೀರಿಡುತ್ತಿರುವ ಕಾಂಗ್ರೆಸ್ ಪಕ್ಷ ಮನಮೋಹನ್ ಸಿಂಗ್ ಅವರ ರಾಜಕೀಯ ಗುರು, ಮಾಜಿ ಪ್ರಧಾನಿ ಶ್ರೀ ಪಿ.ವಿ.ನರಸಿಂಹರಾವ್ ಅವರನ್ನ ಹೇಗೆ ನಡೆಸಿಕೊಂಡಿತ್ತು ಎಂದು ದೇಶದ ಜನತೆ ಇನ್ನೂ ಮರೆತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಶೋಕ್, ಎಐಸಿಸಿ ಕಚೇರಿಯಲ್ಲಿ ನರಸಿಂಹ ರಾವ್ ಅವರ ಪಾರ್ಥಿವ ಶರೀರ ಇಡುವುದಿರಲಿ, ನವದೆಹಲಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಸುವುದಕ್ಕೂ ನೆಹರೂ-ಗಾಂಧಿ ಕುಟುಂಬ ಅವಕಾಶ ನೀಡಿಲಿಲ್ಲ. ಜೀವನದುದ್ದಕ್ಕೂ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿದ್ದ, ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ ಬಂದಾಗಲೆಲ್ಲಾ ಅದನ್ನು ನಿಭಾಯಿಸಿ 'ಟ್ರಬಲ್ ಶೂಟರ್' ಎಂದೇ ಖ್ಯಾತರಾಗಿದ್ದ ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ನಿಧನರಾದಾಗ ಕಾಂಗ್ರೆಸ್ ಪಕ್ಷ ಒಂದು ಶ್ರದ್ಧಾಂಜಲಿ ಸಭೆ ಕೂಡ ನಡೆಸಲಿಲ್ಲ. ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಿಧನರಾದಾಗ ಸೋನಿಯಾ ಗಾಂಧಿ ಅವರು ಕನಿಷ್ಠ ಪಕ್ಷ ಸಂತಾಪವನ್ನೂ ವ್ಯಕ್ತಪಡಿಸಲಿಲ್ಲ.

ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಹಾಸನದಲ್ಲಿ ನಡೆಸಲು ಉದ್ದೇಶಿಸಿದ್ದ ಸ್ವಾಭಿಮಾನಿ ಸಮಾವೇಶವನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮೂಲಕ ಹೈಜಾಕ್ ಮಾಡಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಮಾಡಿದ್ದೂ ಸಹ ನೆಹರು-ಗಾಂಧಿ ಪರಿವಾರದ ಕಪಿಮುಷ್ಠಿಯಲ್ಲಿರುವ ಕಾಂಗ್ರೆಸ್ ಪಕ್ಷ ಮುಂದೆ ಸಿದ್ದರಾಮಯ್ಯನವರನ್ನು ಹೇಗೆ ನಡೆಸಿಕೊಳ್ಳಲಿದೆ ಎಂಬುದಕ್ಕೆ ಟ್ರೈಲರ್. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಕಲಿ ಗಾಂಧಿಗಳು ಮಾತ್ರ ನಾಯಕರು. ಮಿಕ್ಕವರೆಲ್ಲರೂ ಗುಲಾಮರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT