ಪ್ರಿಯಾಂಕ್ ಖರ್ಗೆ 
ರಾಜಕೀಯ

ನಾನು ಬಿಜೆಪಿ ಸಿದ್ಧಾಂತಕ್ಕೆ ವಿರುದ್ಧ; ಆ ಕಾರಣಕ್ಕೇ ನನ್ನನ್ನು ಟಾರ್ಗೆಟ್: ಪ್ರಿಯಾಂಕ್ ಖರ್ಗೆ

ಸಂತ್ರಸ್ತರಲ್ಲಿ ಯಾರಿಗಾದರೂ ನ್ಯಾಯ ದೊರಕಿಸಿಕೊಡಲು ಬಿಜೆಪಿಗೆ ನಿಜವಾಗಿಯೂ ಆಸಕ್ತಿ ಇದ್ದರೆ, ಮೊದಲು ವಿಜಯೇಂದ್ರ ತನ್ನ ತಂದೆಯ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ತಾವು ರಾಜೀನಾಮೆ ನೀಡಲಿ' ಎಂದು ಸವಾಲೆಸೆದರು.

ಬೆಂಗಳೂರು: 26 ವರ್ಷದ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ತಳ್ಳಿಹಾಕಿದ್ದಾರೆ ಮತ್ತು ಅದರ ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ಬಿಜೆಪಿ ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.

ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದರು.

'ಬಿಜೆಪಿಯು ಎಲ್ಲವನ್ನೂ ಮಾಡಬಹುದು. ಆದರೆ, ಈ ಆತ್ಮಹತ್ಯೆಯು ಸರ್ಕಾರಕ್ಕೂ ಮತ್ತು ನನಗೂ ಹೇಗೆ ಸಂಬಂಧಿಸಿದೆ ಎಂಬುದನ್ನು ಕರ್ನಾಟಕದ ಜನರ ಮುಂದಿಡುವಲ್ಲಿ ಅವರಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಈ ವಿಚಾರದ ಮೂಲಕ ಅವರು ತಮ್ಮ ನಾಯಕತ್ವವನ್ನು ಸ್ಥಾಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಬಿಜೆಪಿ ಈಗ ಒಂದು ಬಣ-ಪ್ರೇರಿತ ಪಕ್ಷವಾಗಿದೆ. ಕರ್ನಾಟಕದಲ್ಲಿ ನಾಯಕತ್ವದ ಕಿತ್ತಾಟ ನಡೆಯುತ್ತಲೇ ಇದೆ. ಅವರು ಎಂದಿನಂತೆ ಈ ಸಾವನ್ನು ರಾಜಕೀಯ ಮಾಡುತ್ತಿದ್ದಾರೆ' ಎಂದು ದೂರಿದರು.

'ಬಿಜೆಪಿಯವರು ನನ್ನನ್ನು ಗುರಿಯಾಗಿಸುತ್ತಿದ್ದಾರೆ. ಏಕೆಂದರೆ, ನಾನು ಅವರ ಸಿದ್ಧಾಂತಕ್ಕೆ ವಿರುದ್ಧವಾಗಿದ್ದೇನೆ. ನಾನು ಆರ್‌ಎಸ್‌ಎಸ್ ಮತ್ತು ಮನುಸ್ಮೃತಿಯ ವಿರುದ್ಧ ಇದ್ದೇನೆ ಮತ್ತು ನಾನು ಅದರ ಬಗ್ಗೆ ದನಿಯೆತ್ತಿದ್ದೇನೆ. ಅಲ್ಲದೆ, ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ಮತ್ತು ಸಂವಿಧಾನವನ್ನು ಅನುಸರಿಸುತ್ತೇವೆ. ಆದ್ದರಿಂದ ಅವರು ಸಹಜವಾಗಿ ಇಂತಹ ವಿಚಾರಗಳಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಾರೆ. ಸಂತ್ರಸ್ತರಲ್ಲಿ ಯಾರಿಗಾದರೂ ನ್ಯಾಯ ದೊರಕಿಸಿಕೊಡಲು ಬಿಜೆಪಿಗೆ ನಿಜವಾಗಿಯೂ ಆಸಕ್ತಿ ಇದ್ದರೆ, ಮೊದಲು ವಿಜಯೇಂದ್ರ ತನ್ನ ತಂದೆಯ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ತಾವು ರಾಜೀನಾಮೆ ನೀಡಲಿ' ಎಂದು ಸವಾಲೆಸೆದರು.

ಬೀದರ್ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಮತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ ನಂತರ ಸಚಿವರು ತಿರುಗೇಟು ನೀಡಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಾಪನೂರ ಅವರ ಕಿರುಕುಳ ಮತ್ತು ಬೆದರಿಕೆಯಿಂದ ಬೀದರ್‌ನ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್ ಈ ಬಗ್ಗೆ ಡೆತ್‌ನೋಟ್‌ನಲ್ಲಿ ವಿಸ್ತೃತವಾಗಿ ಹೇಳಿದ್ದಾರೆ ಎಂದು ವಿಜಯೇಂದ್ರ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT