ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

'SSLC ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ: ಒಂದು ಕೈಯ್ಯಲ್ಲಿ ಕೊಟ್ಟು 10 ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿದೆ'

ಅಕ್ರಮ ಸುಲಿಗೆಯಲ್ಲಿ 'ಸಿದ್ದಹಸ್ತ'ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ.

ಬೆಂಗಳೂರು: ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಅಕ್ರಮ ಸುಲಿಗೆಯಲ್ಲಿ 'ಸಿದ್ದಹಸ್ತ'ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ.

ಪ್ರಶ್ನೆಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ. ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿರುವುದು ಸರಕಾರ ಎಷ್ಟರ ಮಟ್ಟಿಗೆ ದಿವಾಳಿಯೆದ್ದು ಹೋಗಿದೆ ಎನ್ನುವುದಕ್ಕೆ ಉದಾಹರಣೆ ಎಂದು ಕಿಡಿಕಾರಿದ್ದಾರೆ.

ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರು ವೆಚ್ಚ ವಸೂಲಿ ಮಾಡಿ, ಆ ಮೊತ್ತವನ್ನು ಇಲಾಖೆ ಉಪ ನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕು ಎಂದು ಅವರು ಫರ್ಮಾನು ಹೊರಡಿಸಿದ್ದಾರೆ. ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT