ಸಚಿವ ಸತೀಶ ಜಾರಕಿಹೊಳಿ 
ರಾಜಕೀಯ

ಲಕ್ಷ್ಮಣ ಸವದಿ ಕಾಂಗ್ರೆಸ್‌ ಪರವಾಗಿದ್ದು, ಪಕ್ಷ ಬಿಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ

ಶಾಸಕರಾದ ಲಕ್ಷ್ಮಣ ಸವದಿ ಕಾಂಗ್ರೆಸ್‌ ಪರವಾಗಿದ್ದು, ಅವರು ಕಾಂಗ್ರೆಸ್‌ ಬಿಡುವುದಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಸೋಮವಾರ ಹೇಳಿದರು.

ಬೆಳಗಾವಿ: ಶಾಸಕರಾದ ಲಕ್ಷ್ಮಣ ಸವದಿ ಕಾಂಗ್ರೆಸ್‌ ಪರವಾಗಿದ್ದು, ಅವರು ಕಾಂಗ್ರೆಸ್‌ ಬಿಡುವುದಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮತನಾಡಿದ ಅವರು, ‘ಸವದಿ ಬಿಜೆಪಿ ಸೇರುತ್ತಾರೆ’ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

‘ಜಗದೀಶ ಶೆಟ್ಟರ್ ಅವರ ಕೇಸ್‌ ಬೇರೆ. ಸವದಿ ಕೇಸ್‌ ಬೇರೆ. ಒಂದು ಕೇಸ್‌ ಅನ್ನು ಇನ್ನೊಂದಕ್ಕೆ ಹೋಲಿಸಲಾಗದು. ಎಲ್ಲ ಕೇಸ್‌ ಬೇರೆ ಬೇರೆ ಇರುತ್ತವೆ. ಒಬ್ಬ ಡಾಕ್ಟರ್ ಬಳಿ ಒಬ್ಬೊಬ್ಬರದ್ದು ಬೇರೆ ಬೇರೆ ಕೇಸ್ ಪೇಪರ್ ಇರುತ್ತವೆ’ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಇದೇ ವೇಳೆ ಸವದಿ ಅವರಿಗೆ ಸಚಿವ ಸ್ಥಾನ ಸಿಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇನ್ನೂ ಸಮಯವಿದೆ. ಒಳ್ಳೆಯವರಿಗೆ ಅವಕಾಶವಿದೆ. ಅವರಿಗೂ ಸಾಮರ್ಥ್ಯವಿದೆ. ಉತ್ತಮ ಕೆಲಸ ಮಾಡಿದ್ದಾರೆ. ಸಚಿವ ಸ್ಥಾನ ಸಿಗುವ ಅವಕಾಶಗಳು ಮುಂದಿನ ದಿನಗಳಲ್ಲಿವೆ. ಇಲ್ಲ ಎಂದು ಹೇಳಲು ಆಗುವುದಿಲ್ಲ ಎಂದು ಹೇಳಿದರು.

ಬೆಳಗಾವಿ ಲೋಕಸಭೆ ಕ್ಷೇತ್ರದ ಟಿಕೆಟ್‌ಗೆ ಇಬ್ಬರ ಹೆಸರು ಕೊಟ್ಟಿದ್ದೇವೆ. ಆದರೆ, ಒಬ್ಬರ ಹೆಸರನ್ನು ಪಕ್ಷದ ಹೈಕಮಾಂಡ್ ಅಂತಿಮಗೊಳಿಸಬೇಕಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಜೊತೆಗೆ, ಇನ್ನೊಂದು ಸುತ್ತಿನ ಚರ್ಚೆ ಆಗಬೇಕಿದೆ ಎಂದು ತಿಳಿಸಿದರು.

‘ಚಿಕ್ಕೋಡಿ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ. ಪ್ರತಿ ಬಾರಿ ಒದಿಸಿಕೊಳ್ಳಲು ನಾನೇನೂ ಫುಟ್‌ಬಾಲ್‌ ಅಲ್ಲ’ ಎಂಬ ವಿಧಾನ ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿಕೆಗೆ ಪ್ರತಿಕ್ರಿಯಿಸಿ, ಪ್ರಕಾಶ್ ಹುಕ್ಕೇರಿ ಸ್ಪರ್ಧಿಸುವುದಿಲ್ಲ ಎಂದಾಗ ಸ್ಪರ್ಧಿಸುತ್ತಾರೆ. ಸ್ಪರ್ಧಿಸುತ್ತೇನೆ ಎಂದಾಗ ಸ್ಪರ್ಧಿಸಲ್ಲ. ಆ ಡಿ–ಕೋಡ್ ನಮಗೆ ಗೊತ್ತಿದೆ. ಅವರು ಏನು ಹೇಳುತ್ತಾರೆಯೋ, ಅದರ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ. ಎರಡೂ ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನಿಸುತ್ತೇವೆ’ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT