ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ನವದೆಹಲಿ: ಗುಜರಾತ್ ಗೆ ನೀಡಿರುವ ಯೋಜನೆಗಳನ್ನು ನಮಗೂ ನೀಡಬೇಕು- ಡಿಸಿಎಂ ಡಿಕೆ ಶಿವಕುಮಾರ್

ಕೇಂದ್ರ ಸರ್ಕಾರ ಗುಜರಾತಿಗೆ ನೀಡಿರುವ ನೀತಿಗಳು, ಯೋಜನೆಗಳನ್ನು ನಮಗೂ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ಗುಜರಾತಿಗೆ ನೀಡಿರುವ ನೀತಿಗಳು, ಯೋಜನೆಗಳನ್ನು ನಮಗೂ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಜಂತರ್ ಮಂತರ್ ನಲ್ಲಿಂದು ಕರ್ನಾಟಕ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾವು ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ, ನಾವು ಪಡೆಯಬೇಕಾದ ಶೇ. 13 ರಷ್ಟು ತೆರಿಗೆ ಪಾಲನ್ನು ಪಡೆದರೆ ಇತರ ರಾಜ್ಯಗಳಿಗೆ ಲಾಭವಾದರೂ ನನಗೆ ಅಭ್ಯಂತರವಿಲ್ಲ. ಕೇಂದ್ರ ಸರ್ಕಾರ ಗುಜರಾತ್‌ಗೆ ನೀಡಿದ ನೀತಿಗಳು ಯೋಜನೆಗಳನ್ನು  ನಮಗೂ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕರ್ನಾಟಕಕ್ಕೆ ಬರಬೇಕಾಗಿದ್ದ 62 ಸಾವಿರದ 098 ಕೋಟಿ ರೂ.ಕಳೆದುಕೊಂಡಿದ್ದೇವೆ, ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ: ಸಿಎಂ ಸಿದ್ದರಾಮಯ್ಯ

ಈ ಪ್ರತಿಭಟನೆಯು 'ನಮ್ಮ ತೆರಿಗೆಗಳು, ನಮ್ಮ ಹಕ್ಕುಗಳು'; 'ನಮ್ಮ ಆದಾಯ, ನಮ್ಮ ಹಕ್ಕು ಆಗಿದೆ. ತೆರಿಗೆ ಕಟ್ಟಿರುವ ನಮ್ಮ ಮಕ್ಕಳು, ಪುರುಷರು ಮತ್ತು ಮಹಿಳೆಯರಿಗಾಗಿ ಕೇಂದ್ರದಿಂದ ನ್ಯಾಯಯುತವಾಗಿ ತೆರಿಗೆ ಹಂಚಿಕೆಯಲ್ಲಿ ಪಾಲು ಕೇಳುತ್ತಿದ್ದೇವೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಸರಿಯಾದ ಪಾಲು ದೊರೆಯಬೇಕು ಎಂದು ಒತ್ತಾಯಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT