ದೆಹಲಿಯಲ್ಲಿ ಜೋಶಿ ಭೇಟಿ ಮಾಡಿದ ವಿಜಯೇಂದ್ರ 
ರಾಜಕೀಯ

ರಾಜ್ಯಸಭೆಗೆ ಸೋಮಣ್ಣ, ರಾಜೀವ್ ಚಂದ್ರಶೇಖರ್?: ಮುನಿಸು ಮರೆತ ಯತ್ನಾಳ್-ವಿಜಯೇಂದ್ರ ದೆಹಲಿಯಲ್ಲಿ ಮುಖಾಮುಖಿ!

ಲೋಕಸಭಾ ಚುನಾವಣೆಗೆ ಸಿದ್ಧತೆ ಮತ್ತು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೈಕಮಾಂಡ್ ನಾಯಕರ ಜೊತೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆಗೆ ಸಿದ್ಧತೆ ಮತ್ತು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೈಕಮಾಂಡ್ ನಾಯಕರ ಜೊತೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದ ನೂತನ ಬಿಜೆಪಿ ಚುನಾವಣಾ ಉಸ್ತುವಾರಿ ಡಾ.ರಾಧಾ ಮೋಹನ್ ದಾಸ್ ಅಗರ್​ವಾಲ್ ಅವರನ್ನು ಭೇಟಿಯಾಗಿದ್ದಾರೆ.

ಫೆಬ್ರವರಿ 27 ರ ರಾಜ್ಯಸಭೆ ಮತ್ತು ಪರಿಷತ್ತಿನ ಚುನಾವಣೆಗಳ ಕುರಿತು ತಾವು ಚರ್ಚಿಸಿದ್ದಾಗಿ ವಿಜಯೇಂದ್ರ ತಿಳಿಸಿದ್ದಾರೆ, ಬಿಜೆಪಿಯು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ರಾಜ್ಯ ಸಭೆಗೆ ಮರುನಾಮಕರಣ ಮಾಡುವ ಸಾಧ್ಯತೆಯಿದೆ. ಹಾಗೆಯೇ ಸೋಮಣ್ಣ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಸಂಬಂಧ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ.

ವಿಜಯೇಂದ್ರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾದರು. ಸಭೆಯಲ್ಲಿ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಉಪಸ್ಥಿತರಿದ್ದರು, ಆದರೆ ವಿಶೇಷ ಉಲ್ಲೇಖ ಮಾಡುವ ಅಗತ್ಯವಿಲ್ಲ ಎಂದು ವಿಜಯೇಂದ್ರ ಸಮರ್ಥಿಸಿಕೊಂಡರು. ಎಲ್ಲಾ ವಿಷಯಗಳ ಬಗ್ಗೆ ನಡ್ಡಾ ಅವರೊಂದಿಗೆ ಚರ್ಚಿಸಲಾಗಿದೆ ಮತ್ತು ಪಕ್ಷದ ಹೈಕಮಾಂಡ್ ಅಂತಿಮವಾಗಿ ಅಭ್ಯರ್ಥಿಗಳನ್ನು ನಿರ್ಧರಿಸುತ್ತದೆ.

ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ ಜಾರಕಿಹೊಳಿ ಅವರು ಸಚಿವ ಜೋಶಿ ಅವರನ್ನು ಭೇಟಿ ಮಾಡುವ ವೇಳೆ ಅನಿರೀಕ್ಷಿತವಾಗಿ ಬಂದರು  ಎಂದು ಹೇಳಿದ ಅವರು, ಅದರಲ್ಲಿ ಯಾವುದೇ ವಿಶೇಷ ಅರ್ಥವನ್ನು ಕಲ್ಪಿಸುವ ಅಗತ್ಯವಿಲ್ಲ. ಗುರುವಾರ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರೊಂದಿಗೆ ಲೋಕಸಭೆ ಚುನಾವಣೆಗೆ ಸಿದ್ಧತೆ ಕುರಿತು ಚರ್ಚಿಸಿದ್ದೇನೆ ಎಂದು ವಿಜಯೇಂದ್ರ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT