ಕೇಂದ್ರ ಸಚಿವ ರಾಮದಾಸ್ ಅಠವಳೆ 
ರಾಜಕೀಯ

ಶಿರಡಿ ಅಥವಾ ಸೊಲ್ಲಾಪುರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಚಿಂತನೆ: ಕೇಂದ್ರ ಸಚಿವ ರಾಮದಾಸ್ ಅಠವಳೆ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿರಡಿ ಅಥವಾ ಸೊಲ್ಲಾಪುರ ಕ್ಷೇತ್ರದಿಂದ ಸ್ಪರ್ಧಿಸುವ ಚಿಂತನೆ ನಡೆಸಿದ್ದು, ಈ ಕುರಿತು ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿದ ನಂತರವೇ ಅಂತಿಮ ತೀರ್ಮಾನ.

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿರಡಿ ಅಥವಾ ಸೊಲ್ಲಾಪುರ ಕ್ಷೇತ್ರದಿಂದ ಸ್ಪರ್ಧಿಸುವ ಚಿಂತನೆ ನಡೆಸಿದ್ದು, ಈ ಕುರಿತು ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿದ ನಂತರವೇ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ) ಮುಖ್ಯಸ್ಥ, ''ಲೋಕಸಭೆಯಲ್ಲಿ ನನ್ನ ಪಕ್ಷಕ್ಕೆ ಒಬ್ಬ ಸದಸ್ಯನೂ ಇಲ್ಲ. ನಾನು ಶಿರಡಿ ಅಥವಾ ಸೊಲ್ಲಾಪುರದಿಂದ ಸ್ಪರ್ಧಿಸಲು ಯೋಚಿಸುತ್ತಿದ್ದೇನೆ. ಈ ಬಗ್ಗೆ ಜೆಪಿ ನಡ್ಡಾ, ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇನೆ" ಎಂದರು.

ಮೀಸಲಾತಿ ವಿಷಯವನ್ನು ಪ್ರಸ್ತಾಪಿಸಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಅಠವಳೆ, "ಆರಂಭದಲ್ಲಿ, ಎಸ್‌ಸಿ ಸಮುದಾಯಕ್ಕೆ ಅವರ ಜನಸಂಖ್ಯೆಯು ಶೇಕಡಾ 15 ರಷ್ಟಿದ್ದ ಕಾರಣಕ್ಕೆ ಶೇಕಡಾ 15 ರಷ್ಟು ಮೀಸಲಾತಿ ನೀಡಲಾಯಿತು. ಬುಡಕಟ್ಟು ಜನಸಂಖ್ಯೆಯ ಕಾರಣದಿಂದ ಎಸ್‌ಟಿಗೆ ಶೇಕಡಾ 7.5 ರಷ್ಟು ನೀಡಲಾಗಿದೆ. ಆದರೆ ಈಗ ಈ ಜನಸಂಖ್ಯೆಯು ಸುಮಾರು ಶೇ. 25 ರಷ್ಟಿದೆ. ಆದ್ದರಿಂದ ಎಸ್‌ಸಿ ಮತ್ತು ಎಸ್‌ಟಿಗೆ ಶೇಕಡಾ 2.5 ರಷ್ಟು ಮೀಸಲಾತಿಯನ್ನು ಹೆಚ್ಚಿಸಬೇಕು ಎಂಬುದು ಅನೇಕರ ಬೇಡಿಕೆಯಾಗಿದೆ ಮತ್ತು ಇದು ನನ್ನ ಪಕ್ಷದ ಬೇಡಿಕೆಯಾಗಿದೆ ಎಂದರು.

ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ(ಇಡಬ್ಲ್ಯುಎಸ್) ಶೇ. 10 ರಷ್ಟು ಮೀಸಲಾತಿಯನ್ನು ಅನುಮೋದಿಸಿದೆ ಮತ್ತು ಜನಗಣತಿ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸಹ ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT