ಡಾ ಜಿ ಪರಮೇಶ್ವರ್  
ರಾಜಕೀಯ

ರಾಜಕೀಯ ಸೇಡಿನಿಂದ ಕಾಂಗ್ರೆಸ್ ಪಕ್ಷದ ಬ್ಯಾಂಕ್‌ ಖಾತೆಗಳನ್ನ ಬಿಜೆಪಿ ಸೀಜ್ ಮಾಡಿದೆ: ಪರಮೇಶ್ವರ್

ಆದಾಯ ತೆರಿಗೆ (ಐಟಿ) ಇಲಾಖೆಯು ಕಾಂಗ್ರೆಸ್‌ನ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವ ಹಿಂದೆ ರಾಜಕೀಯ ದ್ವೇಷವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರು: ಆದಾಯ ತೆರಿಗೆ (ಐಟಿ) ಇಲಾಖೆಯು ಕಾಂಗ್ರೆಸ್‌ನ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವ ಹಿಂದೆ ರಾಜಕೀಯ ದ್ವೇಷವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಹೇಗಾದರೂ ತೊಂದರೆ ಕೊಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಚುನಾವಣೆ ಬಾಂಡ್ ತೆಗೆದುಕೊಳ್ಳಬಾರದು ಎಂದು ಆದೇಶ ಮಾಡಿದೆ. ಇಲ್ಲಿವರೆಗೂ ತೆಗೆದುಕೊಂಡಿರೋ ಬಾಂಡ್‌ಗಳ ಬಗ್ಗೆ ಮಾಹಿತಿ ಕೊಡುವಂತೆ ಸುಪ್ರೀಂ ಕೋರ್ಟ್ ಕೇಳಿದೆ. ಈ ಹಿನ್ನೆಲೆಯಲ್ಲಿ ಅವರು ಸೀಜ್‌ ಮಾಡಿದ್ದಾರೆ ಎನಿಸುತ್ತಿದೆ. ಆದರೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಖಾತೆಗಳನ್ನ ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ. ಅಕೌಂಟ್ ‌ವಿವರ ಕೇಳಬಹುದಿತ್ತು. ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ ಎಂದು ತಿಳಿಸಿದ್ದಾರೆ.

ಐಟಿಗೆ ಅರಿವಾದ ಮೇಲೆ ಅಕೌಂಟ್ ಓಪನ್ ಮಾಡಿದ್ದಾರೆ. ಇದೆಲ್ಲವನ್ನು ನೋಡಿದರೆ ಉದ್ದೇಶ ಪೂರ್ವಕವಾಗಿ ಕೇಂದ್ರ ಮಾಡುತ್ತಿದೆ ಎಂದೆನಿಸುತ್ತಿದೆ. ಅಂತ ಈ ಸಂಧರ್ಭದಲ್ಲಿ ಮಾಡಿದಾಗ ಉದ್ದೇಶಪೂರ್ವಕವಾಗಿ ಚುನಾವಣೆಗೆ ತೊಂದರೆ ಮಾಡೋದಕ್ಕೆ‌ ಮಾಡುತ್ತಿದ್ದಾರೆಂ ಎನಿಸುತ್ತಿದೆ. ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಹೀಗೆ, ಆದರೆ‌ ಇದು ಉದ್ದೇಶಪೂರ್ವಕವಾಗಿ ಆಗಿದೆ ಎನಿಸುತ್ತದೆ. ಇದರಲ್ಲಿ ‌ರಾಜಕೀಯ ಇದೆ ಎಂದೆನಿಸುತ್ತಿದೆ ಎಂದು ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT