ಡಿಕೆ ಸುರೇಶ್ ಭಾವಚಿತ್ರವಿರುವ ಕುಕ್ಕರ್  
ರಾಜಕೀಯ

ಮತದಾರರಿಗೆ ಕುಕ್ಕರ್‌ ಆಮಿಷ: ಸಂಸದ ಡಿಕೆ ಸುರೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯ

ಲೋಕಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ವಿರುದ್ಧ ಮತದಾರರಿಗೆ ಕುಕ್ಕರ್ ಆಮಿಷದ ಆರೋಪ ಕೇಳಿಬಂದಿದೆ.

ಬೆಂಗಳೂರು: ಲೋಕಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ವಿರುದ್ಧ ಮತದಾರರಿಗೆ ಕುಕ್ಕರ್ ಆಮಿಷದ ಆರೋಪ ಕೇಳಿಬಂದಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಬಿಜೆಪಿ, ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದ ಬ್ರದರ್ಸ್ ಗಳ ಬ್ರದರ್ ರಿಂದ ಕುಕ್ಕರ್ ಹಂಚಲಾಗುತ್ತಿದೆ. ದೇಶ ವಿಭಜನೆ ಮಾಡುವ ಸಂಚು ರೂಪಿಸಿದ್ದ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರಿಗೆ ಚುನಾವಣೆ ಘೋಷಣೆ ಮುನ್ನವೇ ಸೋಲಿನ ಭೀತಿ ಶುರುವಾಗಿದೆ ಎಂದು ಟೀಕಿಸಿದೆ.

ಗೂಂಡಾಗಿರಿ ಮಾಡುವ ಜೊತೆಗೆ ಸ್ವಲ್ಪ ಅಭಿವೃದ್ಧಿಯನ್ನು ಮಾಡಿದ್ದರೆ ಈಗ ಊರಿಗಿಂತ ಮುಂಚೆ ಮತದಾರರಿಗೆ ಕುಕ್ಕರ್ ಹಂಚುವ ಪ್ರಮೇಯ ಬರುತ್ತಿರಲಿಲ್ಲಾ . ಅಂದಹಾಗೆ ಕನಕಪುರದಲ್ಲಿ ನೀವು ಪ್ರತಿ ಬಾರಿ ಗೆಲ್ಲುವುದು ಗೂಂಡಾಗಿರಿಯಿಂದ ಎಂದು ತಿಳಿದಿತ್ತು. ಆದರೆ, ನಿಮ್ಮ ಗೂಂಡಾ ಮನಸ್ಸಿನೊಳಗೆ ವಾಮಮಾರ್ಗದ ಕುಕ್ಕರ್ ವಿಶಲ್ ಸಹ ಇದೆ ಎಂಬುದು ಜಗಜ್ಜಾಹೀರಾಗಿದೆ ಎಂದು ಕಿಡಿಕಾರಿದೆ.

ಮತದಾರರಿಗೆ ಕುಕ್ಕರ್ ಆಮಿಷ ಒಡ್ಡುತ್ತಿರುವ ಸಂಸದ ಡಿ.ಕೆ. ಸುರೇಶ್ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗದ ಅಧಿಕಾರಿಗಳನ್ನು ಒತ್ತಾಯಿಸುವುದಾಗಿ ಬಿಜೆಪಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

'ನೆರೆಹೊರೆಯವರು ಕೆಟ್ಟವ್ರು, ನಾವೇನ್ ಮಾಡ್ಬೇಕು ಅನ್ನೋದನ್ನ ಬೇರೆಯವ್ರು ಹೇಳೋದ್ ಬೇಡ: ಜೈಶಂಕರ್‌ ಖಡಕ್ ವಾರ್ನಿಂಗ್

ಬರೋಬ್ಬರಿ 10 ಕೋಟಿ ರೂ. ಲಂಚ: ಗುಜರಾತ್ ಐಎಎಸ್ ಅಧಿಕಾರಿಯನ್ನು ಬಂಧಿಸಿದ ED

Himachal Pradesh: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸಾವು: Viral Video ಬಳಿಕ ಪ್ರೊಫೆಸರ್ ಸೇರಿ ನಾಲ್ವರ ವಿರುದ್ಧ ಪ್ರಕರಣ!

Bangladesh ವಿವಾದ: 'ಇತಿಹಾಸ ಮರೆತಿದ್ದಾರೆ.. ತಲೆ ತೆಗೆಯೋದ್ರಲ್ಲಿ ನಮ್ಮನ್ನು ಮೀರಿಸೋರಿಲ್ಲ'..: BJP ನಾಯಕ ಟೆಮ್ಜೆನ್

SCROLL FOR NEXT