ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹಾಗೂ ಸಿಎಂ ಸಿದ್ದರಾಮಯ್ಯ 
ರಾಜಕೀಯ

ಗ್ಯಾರಂಟಿ ಯೋಜನೆಗಳ ವಿರೋಧಿಸುತ್ತಿರುವ ಬಿಜೆಪಿ-ಜೆಡಿಎಸ್ ತಕ್ಕ ಬೆಲೆ ತೆರಬೇಕಾಗುತ್ತದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಲನ್ನು ವಿರೋಧಿಸುತ್ತಿರುವ ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದರು.

ಬಾಣಾವರ (ಹಾಸನ): ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಲನ್ನು ವಿರೋಧಿಸುತ್ತಿರುವ ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದರು.

ಬಾಣಾವರದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಜಾತ್ಯತೀತತೆ ಮರೆತು ಕೋಮುವಾದಿ ಶಕ್ತಿಗಳೊಂದಿಗೆ ಕೈಜೋಡಿಸಿದ್ದಾರೆಂದು ಕಿಡಿಕಾರಿದರು.

ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಸಾಧ್ಯವಿಲ್ಲ ಎಂಬುದನ್ನು ಇತ್ತೀಚಿನ ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಸಾಬೀತಾಗಿದೆ. ಮೋದಿ ಸರ್ಕಾರ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿದೆ. "ಮೋದಿ ಗ್ಯಾರಂಟಿ" ಎಂದು ಮರುನಾಮಕರಣ ಮಾಡಿದ್ದಾರೆ. “ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಶೇ,40 ಕಮಿಷನ್‌ನಲ್ಲಿ ತೊಡಗಿದ್ದರಿಂದ ಜನರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿದ್ದರು ಎಂದು ಹೇಳಿದರು.

ದೇವೇಗೌಡ ವಿರುದ್ಧ ವಾಗ್ದಾಳಿ ನಡೆಸಿ, ಮಣ್ಣಿನ ಮಗ ಎಂದು ಕರೆಯಲ್ಪಡುವವರು ರಾಜ್ಯದ ರೈತರು ಮತ್ತು ಬಡವರ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿರುವುದು ದುರಾದೃಷ್ಟಕರ ಸಂಗತಿ. ಅರಸೀಕೆರೆಯಂತಹ ಬತ್ತಿ ಹೋಗಿರುವ ಪ್ರದೇಶಗಳಿಗೆ ನೀರು ಕೊಡುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಎಚ್.ಡಿ.ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಕೇಂದ್ರದಿಂದ ವಿವಿಧ ಯೋಜನೆಗಳಿಗೆ ಭರವಸೆ ನೀಡಿದ್ದ ಅನುದಾನ ಪಡೆಯುವಲ್ಲಿ ಬಿಜೆಪಿ ನಾಯಕರು ಸಂಪೂರ್ಣ ವಿಫಲರಾಗಿದ್ದಾರೆ. ಜಿಎಸ್‌ಟಿಯಲ್ಲಿ ರಾಜ್ಯದ ಪಾಲನ್ನು ಬಿಡುಗಡೆ ಮಾಡದೆ ಕೇಂದ್ರವು 6.65 ಕೋಟಿ ಕನ್ನಡಿಗರಿಗೆ ಮೋಸ ಮಾಡಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT