ಶಿವಮೊಗ್ಗದ ಫ್ರೀಡಂ ಪಾರ್ಕ್'ನಲ್ಲಿ ಹಮ್ಮಿಕೊಂಡಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್  
ರಾಜಕೀಯ

'ಟೈಮ್ ವೇಸ್ಟ್ ಮಾಡ್ಬೇಡಿ, ವಯಸ್ಸಾಗತ್ತೆ, ಇನ್ನು 9 ವರ್ಷ ಈ ಕಾಂಗ್ರೆಸ್ ಸರ್ಕಾರ ಇರತ್ತೆ, ಬನ್ನಿ ಸೇರ್ಕೊಳ್ಳಿ'

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ತಿದ್ದುಪಡಿ ಮಸೂದೆ ತಂದೇ ತರುತ್ತೇವೆ ಎಂದ ಡಿಸಿಎಂ

ಶಿವಮೊಗ್ಗ: ನಮ್ಮ ಸರ್ಕಾರದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆಗಳಿಂದ ರಾಜ್ಯದ ಧಾರ್ಮಿಕ ಕೇಂದ್ರಗಳಲ್ಲಿ ಆದಾಯ ಹೆಚ್ಚುತ್ತಿದೆ. ಧಾರ್ಮಿಕ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿಯವರು ದೂರಾಲೋಚನೆ ಮಾಡಿ ಹಳ್ಳಿಯಲ್ಲಿರುವ ಚಿಕ್ಕ ದೇವಾಲಯಗಳಿಗೆ ಸಹಾಯ ಮಾಡಿ ಅವುಗಳು ಅಭಿವೃದ್ಧಿಯಾಗಬೇಕು, ಅರ್ಚಕರಿಗೂ ಅನುಕೂಲವಾಗಬೇಕೆಂದು ಕಾಳಜಿ ಹೊಂದಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ನಮ್ಮ ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆ ವಿಫಲವಾಗದು ಎಂಬುದು ನನ್ನ ನಂಬಿಕೆ. ಗ್ರಾಮೀಣ ಭಾಗದಲ್ಲಿರುವ ಚಿಕ್ಕ ದೇವಸ್ಥಾನಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ತಿದ್ದುಪಡಿ ಮಸೂದೆ ತಂದಿದ್ದಾರೆ. ಇದನ್ನು ವಿರೋಧ ಪಕ್ಷದವರು ವಿರೋಧ ಮಾಡಿ ವಿಧಾನ ಪರಿಷತ್ತಿನಲ್ಲಿ ತಿರಸ್ಕೃತವಾಗುವಂತೆ ಮಾಡಿದ್ದಾರೆ. ಮಸೂದೆಯ ಮಸೂದೆಯ ಭಾವನೆಯನ್ನು ಅರ್ಥವಾಗುತ್ತದೆ. ಹಳ್ಳಿಯಲ್ಲಿರುವ ದೇವರು ದೇವರಲ್ಲವೇ ಎಂದು ಡಿ ಕೆ ಶಿವಕುಮಾರ್ ಕೇಳಿದ್ದಾರೆ.

ನಮ್ಮ ಮುಜರಾಯಿ ಇಲಾಖೆಯ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿಯವರು ದೂರದೃಷ್ಟಿಯಿಂದ ಜಾರಿಗೆ ತರಲು ಉದ್ದೇಶಿಸಲಾಗಿದ್ದ ಮಸೂದೆಯಿದು. ಬಿಜೆಪಿ ಮತ್ತು ಜೆಡಿಎಸ್ ನವರು ಪೂರ್ವಯೋಜಿತವಾಗಿ ಪ್ಲ್ಯಾನ್ ಮಾಡಿಕೊಂಡು ಮಸೂದೆಯನ್ನು ವಿಧಾನ ಪರಿಷತ್ ನಲ್ಲಿ ಸೋಲಿಸಿದ್ದಾರೆ. ಮತ್ತೆ ನಮ್ಮ ಸಂಖ್ಯಾಬಲ ಹೆಚ್ಚಾದಾಗ ಇದನ್ನು ಜಾರಿಗೆ ತರುವುದು ಖಂಡಿತ ಎಂದರು.

ಬಿಜೆಪಿಯವರದ್ದು ಮಾತೊಂದು, ಕೃತಿಯೊಂದು, ಅವರೇ ಹಿಂದೂ ದೇವಾಲಯಗಳ ದೊಡ್ಡ ವಿರೋಧಿಗಳು ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಬಿಜೆಪಿಯವರು ರಾಜಕಾರಣ ಮಾಡಲಿ, ಮೂರು ತಿಂಗಳಲ್ಲಿ ನಮಗೆ ಮೆಜಾರಿಟಿ ಬರುತ್ತೆ, ಆವಾಗ ಈ ಬಿಲ್ ನ್ನು ವಿಧಾನ ಪರಿಷತ್ ನಲ್ಲಿ ಧ್ವನಿಮತದಿಂದ ಆಂಗೀಕರಿಸುತ್ತೇವೆ ಎಂದು ಸವಾಲು ಹಾಕಿದರು.

ಕಾಂಗ್ರೆಸ್ ಗೆ ಬನ್ನಿ, ಸೇರಿಕೊಳ್ಳಿ: ​​ ಹೊಸಬರು ಪಕ್ಷ ಸೇರ್ಪಡೆ ವಿಚಾರವಾಗಿ ಟೈಮ್ ವೇಸ್ಟ್ ಮಾಡಬೇಡಿ, ವಯಸ್ಸು ಆಗ್ತಾ ಇರುತ್ತದೆ, ಇನ್ನು ಒಂಭತ್ತು ವರ್ಷಗಳ ಕಾಲ ಈ ಕಾಂಗ್ರೆಸ್ ಸರ್ಕಾರ ಇರುತ್ತದೆ ಎಂದು ಬಹಿರಂಗವಾಗಿ ಆಹ್ವಾನ ನೀಡಿದರು.

ಇಡೀ ರಾಜ್ಯದ ಉದ್ದಗಲಕ್ಕೂ ಅದು ಬಿಜೆಪಿ, ಜೆಡಿಎಸ್ ಆಗಿರಲಿ, ಬೇರೆ ಬೇರೆ ಪಕ್ಷವಾಗಿರಲಿ ಅಥವಾ ಪಕ್ಷಗಳ ಕಾರ್ಯಕರ್ತರೇ ಆಗಿರಲಿ ನಮ್ಮ ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಬರುವುದಾದರೆ ಬರಲಿ, ನಾವು ಖಂಡಿತಾ ಆಹ್ವಾನಿಸುತ್ತೇವೆ, ಯಾರು ಬೇಕಾದರೂ ಬರಬಹುದು, ಇನ್ನು 9 ವರ್ಷಗಳ ಕಾಲ ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುತ್ತದೆ, ಅರ್ಜಿ ಹಾಕಿ, ಟೈಂ ವೇಸ್ಟ್ ಮಾಡಬೇಡಿ, ವಯಸ್ಸು ಕಾಯಲ್ಲ ಎಂದು ಎಲ್ಲಾ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT