ಸಂಸದೆ ಸುಮಲತಾ ಅಂಬರೀಷ್(ಸಂಗ್ರಹ ಚಿತ್ರ) 
ರಾಜಕೀಯ

ಸಂಸದೆ ಸುಮಲತಾ ಮುಂದಿನ ನಡೆಯೇನು?: ಇಂದು ಆಪ್ತರ ಜೊತೆ ಮಹತ್ವದ ಸಭೆ

ಮಂಡ್ಯ ಲೋಕಸಭಾ ಚುನಾವಣೆ ಸ್ಪರ್ಧೆ ಚರ್ಚೆ

ಬೆಂಗಳೂರು: ಸಂಸದೆ ಸುಮಲತಾ ಅಂಬರೀಷ್ ಅವರ ಮುಂದಿನ ರಾಜಕೀಯ ನಡೆ ಕುತೂಹಲವಾಗಿದೆ. ಇತ್ತ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡಲು ಸುಮಲತಾ ಸುತಾರಂ ತಯಾರಿಲ್ಲ, ಅತ್ತ ಜೆಡಿಎಸ್ ಟಿಕೆಟ್ ಗಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿ ಹೈಕಮಾಂಡ್ ಮುಂದೆ ಗಟ್ಟಿಯಾಗಿ ತಮ್ಮ ಪರವಾಗಿ ಬೇಡಿಕೆ ಮಂಡಿಸಿದ್ದಾರೆ.

ಇಂದು ಸುಮಲತಾ ಮಹತ್ವದ ಸಭೆ: ಸುಮಲತಾ ಅವರು ಮಂಡ್ಯ ಬಿಟ್ಟು ಹೋಗುವುದಿಲ್ಲ, ಒಂದು ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರರಾಗಿಯೇ ಸ್ಪರ್ಧಿಸಲಿದ್ದಾರೆ ಎಂದು ಅವರ ಆಪ್ತ ಹನಕೆರೆ ಶಶಿಕುಮಾರ್ ಹೇಳಿದ್ದಾರೆ.

ಆಪ್ತರ ಹೇಳಿಕೆ ಬೆನ್ನಲ್ಲೇ ಇಂದು ಸುಮಲತಾ ಅವರು ಬೆಂಗಳೂರಿನ ಜೆ ಪಿ ನಗರದ ತಮ್ಮ ನಿವಾಸದಲ್ಲಿ ಸಾಯಂಕಾಲ ಮಹತ್ವದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸುಮಲತಾ ಆಪ್ತರು ಹಾಗೂ ಮುಖಂಡರು ಭಾಗಿಯಾಗಲಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ತಮಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಮನವನ್ನು ಹೇಗೆ ಒಲಿಸಬೇಕು, ಒಂದು ವೇಳೆ ಟಿಕೆಟ್ ಸಿಗದೇ ಇದ್ದರೆ ಏನು ಮಾಡಬೇಕೆಂದು ಸಂಸದೆ ಆಪ್ತರ ಜೊತೆ ಚರ್ಚೆ ನಡೆಸಲಿದ್ದಾರೆ. ಈ ಸಭೆ ರಾಜಕೀಯ ಪಡಸಾಲೆಯಲ್ಲಿ ತೀವ್ರ ಚರ್ಚೆಗೂ ಸಹ ಗ್ರಾಸವಾಗಿದೆ.

ಸುಮಲತಾ ಅವರ ನಡೆ ದಳಪತಿಗಳಿಗೆ ತಲೆನೋವಾಗಿದ್ದು, ಬಿಜೆಪಿ ಹೈಕಮಾಂಡ್‌ಗೂ ಸಂದಿಗ್ಧ ಪರಿಸ್ಥಿತಿ ಉಂಟಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT