ಸಂಸದೆ ಸುಮಲತಾ ಅಂಬರೀಷ್(ಸಂಗ್ರಹ ಚಿತ್ರ) 
ರಾಜಕೀಯ

ಸಂಸದೆ ಸುಮಲತಾ ಮುಂದಿನ ನಡೆಯೇನು?: ಇಂದು ಆಪ್ತರ ಜೊತೆ ಮಹತ್ವದ ಸಭೆ

ಮಂಡ್ಯ ಲೋಕಸಭಾ ಚುನಾವಣೆ ಸ್ಪರ್ಧೆ ಚರ್ಚೆ

ಬೆಂಗಳೂರು: ಸಂಸದೆ ಸುಮಲತಾ ಅಂಬರೀಷ್ ಅವರ ಮುಂದಿನ ರಾಜಕೀಯ ನಡೆ ಕುತೂಹಲವಾಗಿದೆ. ಇತ್ತ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡಲು ಸುಮಲತಾ ಸುತಾರಂ ತಯಾರಿಲ್ಲ, ಅತ್ತ ಜೆಡಿಎಸ್ ಟಿಕೆಟ್ ಗಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿ ಹೈಕಮಾಂಡ್ ಮುಂದೆ ಗಟ್ಟಿಯಾಗಿ ತಮ್ಮ ಪರವಾಗಿ ಬೇಡಿಕೆ ಮಂಡಿಸಿದ್ದಾರೆ.

ಇಂದು ಸುಮಲತಾ ಮಹತ್ವದ ಸಭೆ: ಸುಮಲತಾ ಅವರು ಮಂಡ್ಯ ಬಿಟ್ಟು ಹೋಗುವುದಿಲ್ಲ, ಒಂದು ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರರಾಗಿಯೇ ಸ್ಪರ್ಧಿಸಲಿದ್ದಾರೆ ಎಂದು ಅವರ ಆಪ್ತ ಹನಕೆರೆ ಶಶಿಕುಮಾರ್ ಹೇಳಿದ್ದಾರೆ.

ಆಪ್ತರ ಹೇಳಿಕೆ ಬೆನ್ನಲ್ಲೇ ಇಂದು ಸುಮಲತಾ ಅವರು ಬೆಂಗಳೂರಿನ ಜೆ ಪಿ ನಗರದ ತಮ್ಮ ನಿವಾಸದಲ್ಲಿ ಸಾಯಂಕಾಲ ಮಹತ್ವದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸುಮಲತಾ ಆಪ್ತರು ಹಾಗೂ ಮುಖಂಡರು ಭಾಗಿಯಾಗಲಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ತಮಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಮನವನ್ನು ಹೇಗೆ ಒಲಿಸಬೇಕು, ಒಂದು ವೇಳೆ ಟಿಕೆಟ್ ಸಿಗದೇ ಇದ್ದರೆ ಏನು ಮಾಡಬೇಕೆಂದು ಸಂಸದೆ ಆಪ್ತರ ಜೊತೆ ಚರ್ಚೆ ನಡೆಸಲಿದ್ದಾರೆ. ಈ ಸಭೆ ರಾಜಕೀಯ ಪಡಸಾಲೆಯಲ್ಲಿ ತೀವ್ರ ಚರ್ಚೆಗೂ ಸಹ ಗ್ರಾಸವಾಗಿದೆ.

ಸುಮಲತಾ ಅವರ ನಡೆ ದಳಪತಿಗಳಿಗೆ ತಲೆನೋವಾಗಿದ್ದು, ಬಿಜೆಪಿ ಹೈಕಮಾಂಡ್‌ಗೂ ಸಂದಿಗ್ಧ ಪರಿಸ್ಥಿತಿ ಉಂಟಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?