ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ 
ರಾಜಕೀಯ

ಜೆಡಿಎಸ್‌-ಬಿಜೆಪಿ ಮೈತ್ರಿ ಸೀಟು ಹಂಚಿಕೆಯನ್ನು 'ವೈಫ್ ಸ್ವ್ಯಾಪಿಂಗ್‌ ಸಿಸ್ಟಂ' ಎಂದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್!

ಜೆಡಿಎಸ್‌-ಬಿಜೆಪಿ ಮೈತ್ರಿ ಸೀಟು ಹಂಚಿಕೆ ವಿರುದ್ಧ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಅವರು ವಾಗ್ದಾಳಿ ನಡೆಸಿದ್ದು, 'ವೈಫ್ ಸ್ವ್ಯಾಪಿಂಗ್‌ ಸಿಸ್ಟಂ' ರೀತಿ ಎರಡು ಪಕ್ಷಗಳು ಸೀಟು ಹಂಚಿಕೆ ಮಾಡಿಕೊಳ್ಳುತ್ತಿವೆ ಎಂದು ಟೀಕಿಸಿದ್ದಾರೆ.

ಮೈಸೂರು: ಜೆಡಿಎಸ್‌-ಬಿಜೆಪಿ ಮೈತ್ರಿ ಸೀಟು ಹಂಚಿಕೆ ವಿರುದ್ಧ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಅವರು ವಾಗ್ದಾಳಿ ನಡೆಸಿದ್ದು, 'ವೈಫ್ ಸ್ವ್ಯಾಪಿಂಗ್‌ ಸಿಸ್ಟಂ' ರೀತಿ ಎರಡು ಪಕ್ಷಗಳು ಸೀಟು ಹಂಚಿಕೆ ಮಾಡಿಕೊಳ್ಳುತ್ತಿವೆ ಎಂದು ಟೀಕಿಸಿದ್ದಾರೆ.

ಭಾನುವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎರಡು ವರ್ಷಗಳ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ವೈಫ್ ಸ್ವ್ಯಾಪಿಂಗ್‌ ದಂಧೆಯನ್ನು ಪೊಲೀಸರು ಭೇದಿಸಿದ್ದರು. ವೈಫ್-ಸ್ವಾಪಿಂಗ್ ಎಂದರೆ ವಿವಾಹಿತರ ನಡುವೆ ಕೆಲವು ಗಂಟೆಗಳ ಕಾಲ ಪತ್ನಿಯರನ್ನು ವಿನಿಮಯ ಮಾಡಿಕೊಳ್ಳುವುದಾಗಿದೆ. ಬೆಂಗಳೂರಿನಲ್ಲಿ ಪೊಲೀಸರು ಜಾಲವನ್ನು ಭೇದಿಸಿದ ನಂತರ ಇದು ದೊಡ್ಡ ಸುದ್ದಿಯಾಗಿತ್ತು. ಈಗ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸೀಟು ಹಂಚಿಕೆ ಕೂಡ ಹಾಗೆಯೇ ಆಗಿದೆ.

ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ ಲೋಕಸಭಾ ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು, ತುಮಕೂೂರು, ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿಗಳು ಬಿಜೆಪಿ ಚಿಹ್ನೆಯಲ್ಲಿ ಸ್ಪರ್ಧಿಸುತ್ತಾರೆ. ಹೀಗೆ ಮಾಡಿ ಜೆಡಿಎಸ್ ಪಕ್ಷವನ್ನು ಬಿಜೆಪಿ ಮುಗಿಸಲು ಹೊರಟಿದೆ. ಈಗಾಗಲೇ ಮೈತ್ರಿಗೆ ಜೆಡಿಎಸ್ ಕಾರ್ಯಕರ್ತರಿಗೆ ಅಸಮಾಧಾನವಾಗಿದೆ. ಮುಂದಿನ ದಿನಗಳಲ್ಲಿ ಜನರೇ ಇವರಿಗೆ ಉತ್ತರ ಕೊಡುತ್ತಾರೆಂದು ಹೇಳಿದರು.

ಮೇಲ್ಮನೆಯಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ (ತಿದ್ದುಪಡಿ) ಮಸೂದೆಯ ಸೋಲಿನ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಮಸೂದೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದೆ. ಮಸೂದೆಯ ಮೂಲಕ, ಎ ಗ್ರೇಡ್ ಪಟ್ಟಿಯಡಿ ಬರುವ ಶ್ರೀಮಂತ ಹಿಂದೂ ದೇವಾಲಯಗಳ ಹಣದ ಒಂದು ಭಾಗವನ್ನು ಒಂದು ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಸಿ ದರ್ಜೆಯ ಹಿಂದೂ ದೇವಾಲಯಗಳಿಗೆ ನೀಡಲಾಗುವುದು. ಅರ್ಚಕರಿಗೆ ಆರೋಗ್ಯ ವಿಮೆ, ಅರ್ಚಕರ ಅಕಾಲಿಕ ಮರಣದ ಸಂದರ್ಭದಲ್ಲಿ ಕುಟುಂಬ ಸದಸ್ಯರಿಗೆ ರೂ 2 ಲಕ್ಷ ಪರಿಹಾರ ಮತ್ತು ದೇವಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ ಮಸೂದೆಯಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT