ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ರಾಜಕೀಯ

ರಾಜ್ಯಸಭಾ ಚುನಾವಣೆ: ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Nagaraja AB

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಕಸರತ್ತಿನಲ್ಲಿ ತೊಡಗಿವೆ. ಆಡಳಿತಾರೂಢ ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ ಗೆ ಸ್ಥಳಾಂತರಿಸಲಾಗುತ್ತಿದ್ದು, ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಎಲ್ಲಾರೂ ಒಟ್ಟಾಗಿ ಬಂದು ಮತದಾನ ಮಾಡಬೇಕಂತ ತಿರ್ಮಾನ ಮಾಡಿರುವುದಾಗಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ‌ಚುನಾವಣೆಯಲ್ಲಿ ಅಡ್ಡ ಮತದಾನದ ವಿಚಾರವಾಗಿ ನಮಗೆ ಯಾವುದೇ ಭಯ ಇಲ್ಲ. ಅಡ್ಡಮತದಾನ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಯಾರು ಸದಸ್ಯತ್ವವನ್ನು ಕಳೆದುಕೊಳ್ಳಬೇಕು, ಪಕ್ಷ ಬಿಟ್ಟು ಹೋಗುವ ನಿರ್ಧಾರ ಮಾಡಿರುವಂತವರು ಅಡ್ಡ ಮತದಾನದ ನಿರ್ಧಾರ ಮಾಡ್ತಾರೆ. ಅಂತವರು ನಮ್ಮ ಪಕ್ಷದಲ್ಲಿ ಯಾರು ಇಲ್ಲ ಎಂದರು.

ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ‌ಚುನಾವಣೆಯಲ್ಲಿ ಅಡ್ಡ ಮತದಾನದ ವಿಚಾರವಾಗಿ ನಮಗೆ ಯಾವುದೇ ಭಯ ಇಲ್ಲ. ಅಡ್ಡಮತದಾನ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಯಾರು ಸದಸ್ಯತ್ವವನ್ನು ಕಳೆದುಕೊಳ್ಳಬೇಕು, ಪಕ್ಷ ಬಿಟ್ಟು ಹೋಗುವ ನಿರ್ಧಾರ ಮಾಡಿರುವಂತವರು ಅಡ್ಡ ಮತದಾನದ ನಿರ್ಧಾರ ಮಾಡ್ತಾರೆ. ಅಂತವರು ನಮ್ಮ ಪಕ್ಷದಲ್ಲಿ ಯಾರು ಇಲ್ಲ ಎಂದರು.

SCROLL FOR NEXT