ಸಂಗ್ರಹ ಚಿತ್ರ 
ರಾಜಕೀಯ

ರಾಜ್ಯಸಭಾ ಚುನಾವಣೆ: ಪ್ರತಿಪಕ್ಷಗಳ ಆಫರ್ ತಿರಸ್ಕರಿಸಿದ ನಾಯಕರ ಕುರಿತು ಸಿಎಂ-ಡಿಸಿಎಂ ಮೆಚ್ಚುಗೆ

ಕಾಂಗ್ರೆಸ್ ಪಕ್ಷದ ಕೆಲ ಶಾಸಕರಿಗೆ ಪ್ರತಿಪಕ್ಷಗಳ ನಾಯಕರು ಭಾರೀ ಮೊತ್ತದ ಆಫರ್ ನೀಡಿದ್ದು, ಈ ಆಫರ್'ನ್ನು ತಿರಸ್ಕರಿಸಿ ಪ್ರಾಮಾಣಿಕತೆ ಪ್ರದರ್ಶಿಸಿದ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಕೆಲ ಶಾಸಕರಿಗೆ ಪ್ರತಿಪಕ್ಷಗಳ ನಾಯಕರು ಭಾರೀ ಮೊತ್ತದ ಆಫರ್ ನೀಡಿದ್ದು, ಈ ಆಫರ್'ನ್ನು ತಿರಸ್ಕರಿಸಿ ಪ್ರಾಮಾಣಿಕತೆ ಪ್ರದರ್ಶಿಸಿದ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಗರದ ಹೋಟೆಲ್‌ನಲ್ಲಿ ಕಳೆದ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ನಾಯಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಪರವಾಗಿ ಮತ ಹಾಕಿದರೆ ಕೆಲವು ಕಾಂಗ್ರೆಸ್ ಶಾಸಕರಿಗೆ ಭಾರಿ ಮೊತ್ತದ ಹಣ ನೀಡುತ್ತಿರುವ ಬಗ್ಗೆ ನಮಗೆ ಮಾಹಿತಿ ಇದೆ. ವಿರೋಧ ಪಕ್ಷಗಳ ಪ್ರಸ್ತಾಪದ ಬಗ್ಗೆ ನಮ್ಮ ಶಾಸಕರು ನಮಗೆ ಮಾಹಿತಿ ನೀಡಿದರು. ಒಗ್ಗಟ್ಟಿನಿಂದ ಇರುವ ಮೂಲಕ ಅವರ ತಂತ್ರವನ್ನು ಸೋಲಿಸಿದ್ದಾರೆಂದು ಡಿಕೆ. ಶಿವಕುಮಾರ್ ಅವರು ಹೇಳಿದರು. ಅಲ್ಲದೆ, ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಯಾರೂ ಅಡ್ಡ ಮತದಾನ ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.

ಸಭೆಯಲ್ಲಿ ಯಾವುದೇ ಮತವು ಅಸಿಂಧುವಾಗದಂತೆ ಖಾತ್ರಿಪಡಿಸಲು ಯಾವುದೇ ತಪ್ಪು ಮಾಡದೆ ಮತ ಚಲಾಯಿಸುವ ಬಗ್ಗೆ ಶಾಸಕರಿಗೆ ತರಬೇತಿ ನೀಡಲು ಅಣಕು ಮತದಾನ ನಡೆಸಲಾಯಿತು.

ಮೊದಲು ಪಕ್ಷದ ಅಭ್ಯರ್ಥಿ ಅಜಯ್ ಮಾಕನ್ ಪರ ಅಣಕು ಮತದಾನ ನಡೆದಿದ್ದು, ನಂತರ ಸೈಯದ್ ನಸೀರ್ ಹುಸೇನ್ ಮತ್ತು ಜಿ.ಸಿ.ಚಂದ್ರಶೇಖರ್ ಪರ ಮತಯಾಚನೆ ನಡೆಸಲಾಯಿತು.

ಇಂದು ಬೆಳಗ್ಗೆ ಶಾಸಕರು ವಿಧಾನಸೌಧಕ್ಕೆ ಆಗಮಿಸಲಿದ್ದು, ಪ್ರತಿ ಅಭ್ಯರ್ಥಿಗೆ 46 ಮತಗಳನ್ನು ಹಂಚಿಕೆ ಮಾಡಲಾಗುವುದು. ಪ್ರತಿಸ್ಪರ್ಧಿ ಪಕ್ಷಗಳಿಂದ ಪಕ್ಷವು ಇನ್ನೂ ನಾಲ್ಕು ಹೆಚ್ಚುವರಿ ಮತಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ನಾಯಕರು ಆಶಿಸಿದ್ದಾರೆ.

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಸ್ವತಂತ್ರ ಅಭ್ಯರ್ಥಿಗಳಾದ ಲತಾ ಮಲ್ಲಿಕಾರ್ಜುನ್‌, ಪುಟ್ಟಸ್ವಾಮಿಗೌಡ, ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಸೇರಿದಂತೆ 134 ಕಾಂಗ್ರೆಸ್‌ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT