ಮತಹಕ್ಕು ಚಲಾಯಿಸಿದ ಬಿಜೆಪಿ-ಜೆಡಿಎಸ್ ನಾಯಕರು.
ಮತಹಕ್ಕು ಚಲಾಯಿಸಿದ ಬಿಜೆಪಿ-ಜೆಡಿಎಸ್ ನಾಯಕರು. 
ರಾಜಕೀಯ

ಸೋಲು-ಗೆಲುವು ಮುಖ್ಯವಲ್ಲ, ಒಗ್ಗಟ್ಟು ಪ್ರದರ್ಶಿಸಲು ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ: ಹೆಚ್.ಡಿ. ಕುಮಾರಸ್ವಾಮಿ

Manjula VN

ಬೆಂಗಳೂರು: ಸೋಲು-ಗೆಲವು ಮುಖ್ಯವಲ್ಲ, ಒಗ್ಗಟ್ಟು ಪ್ರದರ್ಶಿಸಲು ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.‌ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದರು.

ರಾಜ್ಯಸಭಾ ಚುನಾವಣೆಯಲ್ಲಿ ಮಂಗಳವಾರ ಮತದಾನ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 'ನಮ್ಮ ಶಾಸಕರ‌ ಒಗ್ಗಟ್ಟನ್ನು ಒಡೆಯಲು ನಡೆಸಿದ ಪ್ರಯತ್ನಗಳನ್ನು ವಿಫಲಗೊಳಿಸುವುದಕ್ಕಾಗಿ ಡಿ. ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ದೇವೆ. ಶರಣಗೌಡ ಕಂದಕೂರ‌ ನಮ್ಮ ಕುಟುಂಬದ ಸದಸ್ಯ. ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ ಎಂಬ ಸಂದೇಶ ರವಾನಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

ತಮ್ಮ ಪಕ್ಷದ ಶಾಸಕರಿಗೆ ಕುಮಾರಸ್ವಾಮಿ ಆಮಿಷ ಒಡ್ಡಿದ್ದರು ಎಂಬ ಕಾಂಗ್ರೆಸ್ ಆರೋಪದ ಕುರಿತು ಪ್ರತಿಕ್ರಿಯಿಸಿ, 'ಆಮಿಷ ಒಡ್ಡುವುದು, ಧಮ್ಕಿ ಹಾಕುವುದು ಕಾಂಗ್ರೆಸ್ ಸಂಸ್ಕೃತಿ ಎಂದು ತಿರುಗೇಟು ನೀಡಿದರು.

SCROLL FOR NEXT