ರಣ್ದೀಪ್ ಸಿಂಗ್ ಸುರ್ಜೇವಾಲಾ 
ರಾಜಕೀಯ

ರಾಜ್ಯಸಭಾ ಚುನಾವಣಾ ಫಲಿತಾಂಶ ಪಕ್ಷದ ತತ್ವ, ನೈತಿಕತೆಗೆ ಸಿಕ್ಕ ಗೆಲುವು: ಸುರ್ಜೇವಾಲಾ

ಕರ್ನಾಟಕ ರಾಜ್ಯಸಭಾ ಚುನಾವಣೆ ಫಲಿತಾಂಶ ಪಕ್ಷದ ತತ್ವ, ಆದರ್ಶ, ಪ್ರಜಾಪ್ರಭುತ್ವ ಮತ್ತು ನೈತಿಕತೆಗೆ ಸಿಕ್ಕ ಗೆಲುವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಹೇಳಿದರು.

ಬೆಂಗಳೂರು: ಕರ್ನಾಟಕ ರಾಜ್ಯಸಭಾ ಚುನಾವಣೆ ಫಲಿತಾಂಶ ಪಕ್ಷದ ತತ್ವ, ಆದರ್ಶ, ಪ್ರಜಾಪ್ರಭುತ್ವ ಮತ್ತು ನೈತಿಕತೆಗೆ ಸಿಕ್ಕ ಗೆಲುವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಹೇಳಿದರು.

ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮೂರು ಮತ್ತು ಬಿಜೆಪಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ.

ಮಾಜಿ ಕೇಂದ್ರ ಸಚಿವರಾದ ಅಜಯ್ ಮಾಕನ್, ಜಿ ಸಿ ಚಂದ್ರಶೇಖರ್ ಮತ್ತು ಸೈಯದ್ ನಾಸೀರ್ ಹುಸೇನ್ (ಕಾಂಗ್ರೆಸ್) ಮತ್ತು ನಾರಾಯಣಸಾ ಕೆ ಭಾಂಡ (ಬಿಜೆಪಿ) ಗೆಲುವು ಸಾಧಿಸಿದ್ದಾರೆ.

ಫಲಿತಾಂಶ ಸಂಬಂಧ ಪ್ರತಿಕ್ರಿಯೆ ನೀಡಿದ ಸುರ್ಜೇವಾಲಾ ಅವರು, ಇದು ಪಕ್ಷದ ತತ್ವ, ಆದರ್ಶ, ಪ್ರಜಾಪ್ರಭುತ್ವ ಮತ್ತು ನೈತಿಕತೆಗೆ ಸಿಕ್ಕ ವಿಜಯವಾಗಿದೆ. ಈ ಮೂಲಕ ಇಡಿ, ಆದಾಯ ತೆರಿಗೆತ ಸಿಬಿಐ ಮತ್ತು ಹಣ ಬಲದ ಮೇಲೆ ಸ್ಥಾಪಿತವಾಗಿರುವ ಬಿಜೆಪಿ ಮತ್ತು ಜನತಾ ದಳ (ಜಾತ್ಯತೀತ)ಕ್ಕೆ ಸೋಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಐದನೇ ಅಭ್ಯರ್ಥಿಯಾಗಿ ಡಿ.ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ ವಿರುದ್ಧವೂ ಸುರ್ಜೇವಾಲಾ ಅವರು ವಾಗ್ದಾಳಿ ನಡೆಸಿದರು.

ಇದು ಕಾಂಗ್ರೆಸ್‌ನ ಸತತ ಮೂರನೇ ಗೆಲುವಾಗಿದೆ. ಮೊದಲನೆಯದು ವಿಧಾನಸಭೆ ಚುನಾವಣೆಯಲ್ಲಿ 224 ಸದಸ್ಯ ಬಲದ ವಿಧಾನಸಭೆಯಲ್ಲಿ 134 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿದ್ದು, ಎರಡನೆಯದು ವಿಧಾನ ಪರಿಷತ್ ಚುನಾವಣೆ ಮತ್ತು ಮೂರನೆಯದು ರಾಜ್ಯಸಭಾ ಚುನಾವಣೆ ಎಂದು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT