ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ 
ರಾಜಕೀಯ

ಅಡ್ಡ ಮತದಾನ ಮಾಡಿದ ಶಾಸಕ ಎಸ್.ಟಿ. ಸೋಮಶೇಖರ್ ವಿರುದ್ಧ ಕ್ರಮ: ಬಿಜೆಪಿ

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರ ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಬಿಜೆಪಿ ಹೇಳಿದೆ.

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರ ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಬಿಜೆಪಿ ಹೇಳಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, "ಎಸ್.ಟಿ.ಸೋಮಶೇಖರ್ ನನಗೆ ಕರೆ ಮಾಡಿ ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ, ರಾಜ್ಯಸಭೆ ಚುನಾವಣೆಯ ಮತದಾನದ ವೇಳೆ ಅಡ್ಡ ಮತದಾನ ಮಾಡಿದ್ದಾರೆ. ಶಿವರಾಮ ಹೆಬ್ಬಾರ್ ಗೈರಾಗಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ಈ ಇಬ್ಬರು ಶಾಸಕರು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ತಿರುಗಾಡುತ್ತಿದ್ದರು. ವಿಧಾನಸಭಾ ಚುನಾವಣೆ ನಡೆದು 9 ತಿಂಗಳಾಗಿಲ್ಲ. ಆಗಲೇ ಪಕ್ಷಾಂತರ ಮಾಡುವುದನ್ನು ಜನ ಕ್ಷಮಿಸುವುದಿಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಮಂಗಳವಾರ ಬೆಳಗ್ಗೆ ಕೂಡ ತಮ್ಮ ಸಂಪರ್ಕದಲ್ಲಿದ್ದು, ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದಿದ್ದರು. ಈಗ ಅವರ ನಡವಳಿಕೆ ಪ್ರಶ್ನಾರ್ಹವಾಗಿದೆ. ಎಸ್. ಟಿ. ಸೋಮಶೇಖರ್ ಬಿಜೆಪಿಯಲ್ಲಿ ಸಚಿವರಾಗಿದ್ದರು. ಪ್ರಭಾವಿ ಜಿಲ್ಲೆಯಲ್ಲಿ ಮೈಸೂರಿನ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದರು. ಈಗ ಅಡ್ಡ ಮತದಾನ ಮಾಡಿ ಭಿನ್ನ ನಡೆ ಅನುಸರಿಸಿದ್ದಾರೆ" ಎಂದು ​ ಆಕ್ರೋಶ ವ್ಯಕ್ತಪಡಿಸಿದರು.

"ಅಡ್ಡ ಮತದಾನ, ಪಕ್ಷ ದ್ರೋಹದ ವಿರುದ್ಧ ಆಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ವಕೀಲ ವಿವೇಕ ರೆಡ್ಡಿ ಅವರಿಗೆ ಸೂಚನೆ ನೀಡಲಾಗಿದೆ. ಕಾನೂನು ತಜ್ಞರ ಜೊತೆ ಕೂಡ ಸಮಾಲೋಚನೆ ನಡೆಯುತ್ತಿದೆ. ಸಾಧ್ಯವಿರುವ ಎಲ್ಲಾ ಕಾನೂನು ಕ್ರಮ ಕೈಗೊಳ್ಳುತ್ತೇವೆ" ಎಂದಪ ಹೇಳಿದರು.

ಇಬ್ಬರೂ ಶಾಸಕರಿಗೂ ವಿಪ್ ಜಾರಿ ಮಾಡಲಾಗಿತ್ತು. ಅವರ ಕಚೇರಿ ಹಾಗೂ ಮನೆಗಳಿಗೆ ವಿಪ್ ಕಳುಹಿಸಿರುವುದರ ಜೊತೆಗೆ ಆಪ್ತ ಸಹಾಯಕರಿಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗಿದೆ. ಪಕ್ಷದ ಚಿಹ್ನೆಯಡಿ ಗೆದ್ದು ದ್ರೋಹ ಮಾಡಿರುವುದನ್ನು ಮತದಾರರು ಕ್ಷಮಿಸಲ್ಲ" ಎಂದು ತಿಳಿಸಿದರು.

"ಎನ್‍ಡಿಎ ಅಭ್ಯರ್ಥಿಯಾಗಿರುವ ಜೆಡಿಎಸ್​ನ ಕುಪೇಂದ್ರ ರೆಡ್ಡಿ ಸೋಲು ಯಾವುದೇ ಮುಜುಗರ ಉಂಟುಮಾಡಿಲ್ಲ. ಪ್ರಯೋಗಾತ್ಮಕವಾಗಿ ಅವರನ್ನು ಕಣಕ್ಕಿಳಿಸಲಾಗಿತ್ತು. ಹೀಗಾಗಿ ಬಿಜೆಪಿ ಅಥವಾ ಜೆಡಿಎಸ್‍ನ ಸೋಲು ಎಂದು ಪರಿಗಣಿಸುವ ಅಗತ್ಯವಿಲ್ಲ" ಎಂದು ಇದೇ ವೇಳೆ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT