ಸಂಸದ ಪ್ರತಾಪ್ ಸಿಂಹ 
ರಾಜಕೀಯ

ಗುರು ಮೋದಿಯವರಂತೆ ದಿಕ್ಕು ತಪ್ಪಿಸುವಲ್ಲಿ ತಾವೂ ಕೂಡ 'ಬ್ರಿಲಿಯಂಟ್ ಪೊಲಿಟಿಷಿಯನ್' ಅಲ್ಲವೇ ಪ್ರತಾಪ್ ಸಿಂಹ ಅವರೇ?

ಪಲಾಯನವಾದಿ ಪ್ರತಾಪ್ ಸಿಂಹ ಅವರೇ ಸಂಸತ್ ದಾಳಿಕೋರರಿಗೆ ಪಾಸ್ ಕೊಟ್ಟಿದ್ದೇಕೆ ಎಂದು ಕೇಳಿದರೆ ಚಾಮುಂಡೇಶ್ವರಿಗೆ ಗೊತ್ತು ಅಂತೀರಿ, ನಿಮ್ಮ ತಮ್ಮ ಕೋಟ್ಯಂತರ ರೂಪಾಯಿ ಬೆಲೆಬಾಳುವ ಮರಗಳನ್ನು ಕಡಿದಿದ್ದೇಕೆ .

ಬೆಂಗಳೂರು: ಪಲಾಯನವಾದಿ ಪ್ರತಾಪ್ ಸಿಂಹ ಅವರೇ ಸಂಸತ್ ದಾಳಿಕೋರರಿಗೆ ಪಾಸ್ ಕೊಟ್ಟಿದ್ದೇಕೆ ಎಂದು ಕೇಳಿದರೆ ಚಾಮುಂಡೇಶ್ವರಿಗೆ ಗೊತ್ತು ಅಂತೀರಿ, ನಿಮ್ಮ ತಮ್ಮ ಕೋಟ್ಯಂತರ ರೂಪಾಯಿ ಬೆಲೆಬಾಳುವ ಮರಗಳನ್ನು ಕಡಿದಿದ್ದೇಕೆ ಎಂದು ಕೇಳಿದರೆ ಡಾ. ಯತೀಂದ್ರ ಅವರ ಕಡೆ ಕೈ ತೋರಿಸುತ್ತೀರಿ, ತಮ್ಮ ಗುರು ಮೋದಿಯವರಂತೆ ವಿಷಯಾಂತರ ಮಾಡುವಲ್ಲಿ, ದಿಕ್ಕು ತಪ್ಪಿಸುವಲ್ಲಿ ತಾವೂ ಕೂಡ “ಬ್ರಿಲಿಯಂಟ್ ಪೊಲಿಟಿಷಿಯನ್” ಅಲ್ಲವೇ ಪ್ರತಾಪ್ ಸಿಂಹ ಅವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಪ್ರತಾಪ್ ಸಿಂಹ ಅವರೇ, ತಮ್ಮ ಪ್ರತಾಪ ಬ್ಯಾರಿಕೇಡ್ ಹಾರುವುದರಲ್ಲಿ ಅಷ್ಟೇ ಅಲ್ಲ, ವಾಸ್ತವಿಕ ಪ್ರಶ್ನೆಗಳಿಗೆ ವಿಷಯಾಂತರ ಮಾಡದೆ ನೇರವಾಗಿ ಉತ್ತರಿಸುವುದರಲ್ಲೂ ನಿಮ್ಮ ಪ್ರತಾಪ ತೋರಿಸಿ. ನಿಮ್ಮ ಸಹೋದರ ಜಮೀನು ಗುತ್ತಿಗೆ ಪಡೆದಿದ್ದು ನಿಜವಲ್ಲವೇ? ನಿಜಕ್ಕೂ ಶುಂಠಿ ಬೆಳೆಯಲು ಗುತ್ತಿಗೆ ಪಡೆದಿದ್ದೋ ಅಥವಾ ಅಲ್ಲಿದ್ದ ಬೆಲೆಬಾಳುವ ಮರಗಳನ್ನು ಲಪಟಾಯಿಸಲು ಗುತ್ತಿಗೆ ಪಡೆದಿದ್ದೋ? ಮರಗಳನ್ನು ಕಡಿದು ಸಾಗಿಸಲು ಜೆಸಿಬಿ, ಹಿಟಾಚಿಗಳನ್ನು ಕಳಿಸಿದ್ದು ನಿಮ್ಮ ತಮ್ಮನೇ ಅಲ್ಲವೇ? ಎಂದಿದೆ.

ಅರಣ್ಯ ಭೂಮಿಯಾಗಲಿ, ಖಾಸಗಿ ಭೂಮಿಯಾಗಲಿ ಅನುಮತಿ ಪಡೆಯದೆ ಮರಗಳನ್ನು ಕಡಿಯುವುದು ಕಾನೂನು ಉಲ್ಲಂಘನೆ ಎಂಬ ಸಾಮಾನ್ಯ ಅರಿವು ಇರಲಿಲ್ಲವೇ? ಕಾನೂನು ಉಲ್ಲಂಘಿಸಿದ್ದರೂ ಪ್ರತಾಪ್ ಸಿಂಹನ ತಮ್ಮ ಎಂದು ಸುಮ್ಮನಿರಬೇಕಿತ್ತೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸಚಿವ ಮಧು ಬಂಗಾರಪ್ಪರವರದ್ದು ವಯಕ್ತಿಕ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರ, ಅವರು ಸಾರ್ವಜನಿಕರ ತೆರಿಗೆಯ ಹಣವನ್ನು ಲಾಪಟಾಯಿಸಿಲ್ಲ, ತಮ್ಮ ಇಲಾಖೆಯಲ್ಲಿ ಅವ್ಯವಹಾರ ಮಾಡಿಲ್ಲ, ಸರ್ಕಾರಕ್ಕೆ ಸಂಬಂಧಿಸಿದಂತೆ ಯಾವುದೇ ಹಗರಣ ನಡೆಸಿಲ್ಲ, ಸರ್ಕಾರದ ಹಣಕ್ಕೆ ನಷ್ಟ ಉಂಟುಮಾಡಿಲ್ಲ. ಮಧು ಬಂಗಾರಪ್ಪನವರ ವಯಕ್ತಿಕ ವ್ಯವಹಾರವನ್ನು ಹಿಡಿದು ಜಗ್ಗಾಡುತ್ತಿರುವ ಬಿಜೆಪಿ ನಾಯಕರು ತಮ್ಮ ತಮ್ಮದೇ ಪಕ್ಷದ ನಾಯಕರು ಹೇಳಿದ 40 ಸಾವಿರ ಕೋಟಿ ರೂಪಾಯಿಯ ಬೃಹತ್ ಹಗರಣದ ಬಗ್ಗೆ ಜನತೆಗೆ ಉತ್ತರ ನೀಡುವುದು ಯಾವಾಗ? ಅದು ಜನರ ಬೆವರಿನ ಹಣ, ಸರ್ಕಾರದ ಹಣ ಬಿ ವೈ ವಿಜಯೇಂದ್ರ  ಅವರೇ, ಮಧು ಬಂಗಾರಪ್ಪನವರ ಕತೆ ಬಿಟ್ಟು 40 ಸಾವಿರ ಕೋಟಿಯ ಬಗ್ಗೆ ಉತ್ತರ ನೀಡಿ ಎಂದು ಕಿಡಿ ಕಾರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!