ಸಚಿವ ಡಿ ಸುಧಾಕರ್ 
ರಾಜಕೀಯ

ರಾಮಮಂದಿರ ಉದ್ಘಾಟನೆ ಚುನಾವಣಾ ಗಿಮಿಕ್: ಬಿಜೆಪಿ ವಿರುದ್ಧ ಸಚಿವ ಡಿ ಸುಧಾಕರ್ ಕಿಡಿ

ಕಳೆದ ಚುನಾವಣೆ ವೇಳೆ ಪುಲ್ವಾಮಾ ಘಟನೆ ತೋರಿಸಿದ್ದ ಬಿಜೆಪಿಯವರು, ಇದೀಗ ರಾಮನ ಫೋಟೊ ಹಿಡಿದು ಗಿಮಿಕ್ ಮಾಡುತ್ತಿದ್ದಾರೆಂದು ಸಚಿವ ಡಿ ಸುಧಾಕರ್ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು: ಕಳೆದ ಚುನಾವಣೆ ವೇಳೆ ಪುಲ್ವಾಮಾ ಘಟನೆ ತೋರಿಸಿದ್ದ ಬಿಜೆಪಿಯವರು, ಇದೀಗ ರಾಮನ ಫೋಟೊ ಹಿಡಿದು ಗಿಮಿಕ್ ಮಾಡುತ್ತಿದ್ದಾರೆಂದು ಸಚಿವ ಡಿ ಸುಧಾಕರ್ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸ್ಟಂಟ್ ನೋಡಿದ್ದೇವೆ. ಎರಡು ಸಲ ಮೂರ್ಖರಾಗಿದ್ದೇವೆ. ಮತ್ತೆ ಮೂರನೇ ಸಲ ಮೂರ್ಖರಾಗಲು ಜನರು ದಡ್ಡರಾಗಲ್ಲ ಎಂಬ ನಂಬಿಕೆ ಇದೆ. ಲೋಕಸಭಾ ಚುನಾವಣೆ ಹಿನ್ನೆಲೆ ರಾಮಮಂದಿರ ಉದ್ಘಾಟನೆ ಮಾಡುತ್ತಿರುವುದ ಎಂಬುದು ಸತ್ಯ ಎಂದು ಹೇಳಿದರು.

ರಾಮಮಂದಿರಕ್ಕೆ ನಾನು, ಶಾಸಕ ರಘುಮೂರ್ತಿ ದುಡ್ಡು ಕೊಟ್ಟಿದ್ದೇವೆ. ಹಿಂದೆಲ್ಲಾ ಇಟ್ಟಿಗೆ ಸಹ ನೀಡಿದ್ದೇವೆ. ರಾಮ ಎಲ್ಲರಿಗೂ ದೇವರು, ಚುನಾವಣೆ ವೇಳೆ ದೇಗುಲ ಉದ್ಘಾಟನೆ ಗಿಮಿಕ್ ಮಾಡೋದು. ಭಾರತ ದೇಶದ ಧಾರ್ಮಿಕ ನಂಬಿಕೆ ಬಳಸಿಕೊಂಡು ಬಿಜೆಪಿಯವರು ಮತ ಗಾಳ ಹಾಕುತ್ತಿದ್ದಾರೆ.

ಕಳೆದ ಚುನಾವಣೆಯಲ್ಲಿ ಎಲ್ಲಿತ್ತು ರಾಮ ಮಂದಿರ? ಪುಲ್ವಾಮ ದಾಳಿಯಲ್ಲಿ ಸುಮ್ಮ ಸುಮ್ಮನೆ ಯಾವುದೋ ಫ್ಲೈಟ್ ತೋರಿಸಿದ್ದರು. ಪಾಪ ಜನ ದೇಶ ಕಾಪಾಡುತ್ತಾರೆಂದು ನಂಬಿದರು. ಪುಲ್ವಾಮಾ ಘಟನೆಯಲ್ಲಿ ಎಷ್ಟು ಜನರು ಸತ್ತರು? ಪುಲ್ವಾಮಾ ಘಟನೆ ಕ್ರಿಯೇಟೆಡ್ ಎಂದು ಪೈಲೆಟ್ ಹೇಳಿಲ್ವಾ? ಎಂದು ಪ್ರಶ್ನಿಸಿದರು.

ಇದೇ ವೇಳೆ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಆಗಿದೆ. ಜೆಡಿಎಸ್‌ನ ಸೆಕ್ಯುಲರ್ ತತ್ವ ಎಲ್ಲಿ ಹೋಯಿತು? ಎಂದು ಪ್ರಶ್ನಿಸಿದರು.

ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವಿದೆ ಎಂದು ಸ್ವತಃ ಅವರದೇ ಪಕ್ಷದ ಶಾಸಕ ಯತ್ನಾಳ್ ಆರೋಪ ಮಾಡಿದ್ದಾರೆ. ಇವರ ಭ್ರಷ್ಟಾಚಾರ ಎಲ್ಲಿವರೆಗೆ ನೋಡಿಕೊಂಡಿರುತ್ತಾರೆ. ನಲವತ್ತು ಪರ್ಸೆಂಟ್ ಸರ್ಕಾರ ಎಂದೇ ಕುಖ್ಯಾತಿ ಗಳಿಸಿದ್ದು ಸತ್ಯ. ಬೆಲೆ ಏರಿಕೆ, ಭ್ರಷ್ಟಾಚಾರ ನೋಡಿಯೆ ಜನ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಲೋಕಸಭಾ ಚುನಾವಣೆಗೂ ಕಾಂಗ್ರೆಸ್ ಕೈಹಿಡಿಯಲಿದ್ದಾರೆ ಎಂದರು.

ಇದೇ ವೇಳೆ ಬಸವರಾಜ ರಾಯರೆಡ್ಡಿ, ಬಿ.ಆರ್.ಪಾಟೀಲ್, ದೇಶಪಾಂಡೆಗೆ ಸಚಿವ ಸ್ಥಾನಮಾನ ನೀಡಿರುವ ಬಗ್ಗೆ ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT