ಡಿವಿ ಸದಾನಂದ ಗೌಡ 
ರಾಜಕೀಯ

ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್‌ನ ಕೆಲವರು ಸೇರಿ ಹಲವರಿಂದ ಒತ್ತಡವಿದೆ: ಡಿವಿ ಸದಾನಂದ ಗೌಡ

ಮತ್ತೆ ಚುನಾವಣೆಗೆ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡವಿದೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಕೇಂದ್ರದ ಮಾಜಿ ಸಚಿವ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಬೆಂಗಳೂರು: ಮತ್ತೆ ಚುನಾವಣೆಗೆ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡವಿದೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಕೇಂದ್ರದ ಮಾಜಿ ಸಚಿವ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒತ್ತಡದಲ್ಲಿ ನನ್ನ ನಿರ್ಧಾರವನ್ನು ನಾನು ಹಿಂಪಡೆಯಬಹುದೇ ಎಂಬುದು ಸದ್ಯಕ್ಕೆ ನನಗೆ ತಿಳಿದಿಲ್ಲ. ಚುನಾವಣಾ ರಾಜಕೀಯದಿಂದ ದೂರ ಉಳಿಯಲು ಪ್ರಯತ್ನಿಸಿದ್ದೆ. ಯುವ ಮುಖಗಳು ಬರಬೇಕು. ಈಗ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್‌ನ ಕೆಲವರು ಸೇರಿದಂತೆ ಹಲವರಿಂದ ಒತ್ತಡ ಬರುತ್ತಿದೆ ಎಂದರು.

'ನನ್ನ ಮೇಲೆ ಸಾಕಷ್ಟು ಒತ್ತಡವಿದೆ. ಈ ಹಂತದಲ್ಲಿ, ನಾನು ಒತ್ತಡವನ್ನು ನಿವಾರಿಸಬಹುದೇ ಮತ್ತು ನನ್ನ ಹಿಂದಿನ ನಿರ್ಧಾರಕ್ಕೆ ಅಂಟಿಕೊಳ್ಳಬಹುದೇ ಎಂದು ಈಗಲೇ ನಾನು ಹೇಳಲಾರೆ' ಎಂದು ತಿಳಿಸಿದರು.

ಪಕ್ಷಾತೀತವಾಗಿ ಹಲವಾರು ಮುಖಂಡರು, ಮಾಜಿ ಮುಖ್ಯಮಂತ್ರಿಗಳು, ಮಾಜಿ ಉಪಮುಖ್ಯಮಂತ್ರಿಗಳು ತಮ್ಮನ್ನು ಭೇಟಿಯಾಗಿದ್ದಾರೆ. 'ಈ ಹಂತದಲ್ಲಿ ನಾನು ಯಾವುದಕ್ಕೂ ಉತ್ತರಿಸಲು ಸಾಧ್ಯವಿಲ್ಲ. ಪಕ್ಷದ ಹಿತಾಸಕ್ತಿ ಮತ್ತು ಕ್ಷೇತ್ರದ ಹಿತಾಸಕ್ತಿ ಬಂದಾಗ ಪಕ್ಷವೇ ಈ ಬಗ್ಗೆ ನಿರ್ಧರಿಸುತ್ತದೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT