ಸತೀಶ್ ಜಾರಕಿಹೊಳಿ 
ರಾಜಕೀಯ

ಹಿಂದುಳಿದ ವರ್ಗದ ನಾಯಕರಿಗೆ ಡಿಸಿಎಂ ಹುದ್ದೆ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್'ಗೆ ಲಾಭ: ಸತೀಶ್ ಜಾರಕಿಹೊಳಿ

ಎಲ್ಲರಿಗೂ ಸಮಾನ ಪ್ರಾಮುಖ್ಯತೆ ನೀಡಿ ಡಿಸಿಎಂ ಹುದ್ದೆ ನೀಡಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಾಭವಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರು ಶುಕ್ರವಾರ ಹೇಳಿದರು.

ಬೆಳಗಾವಿ: ಎಲ್ಲರಿಗೂ ಸಮಾನ ಪ್ರಾಮುಖ್ಯತೆ ನೀಡಿ ಡಿಸಿಎಂ ಹುದ್ದೆ ನೀಡಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಾಭವಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರು ಶುಕ್ರವಾರ ಹೇಳಿದರು.

ತಮ್ಮ ನಿವಾಸದಲ್ಲಿ ನಿನ್ನೆ ನಡೆದ ಭೋಜನಾಕೂಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಂದೇ ಪಕ್ಷದ ಸಚಿವರುಗಳು ಸಹಜವಾಗಿ ಕೂಟಕ್ಕೆ ಸೇರಿದ್ದೇವೆ. ಅದರಲ್ಲಿ ವಿಶೇಷವೇನಿಲ್ಲ. ರಾಜಕಾರಣಿಗಳು ಸೇರಿದರೆ ರಾಜಕಾರಣ ಚರ್ಚೆಯಾಗಿಯೇ ಆಗುತ್ತದೆ ಎಂದು ಹೇಳಿದರು.

ನಮ್ಮ ಮುಂದೆ ಲೋಕಸಭೆ ಚುನಾವಣೆಯ ಸವಾಲಿದೆ. ಅದನ್ನು ನಿಭಾಯಿಸುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಚುನಾವಣೆಗೂ ಮೊದಲೇ ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಿದರೆ ರಾಜಕೀಯವಾಗಿ ಪಕ್ಷಕ್ಕೆ ಲಾಭವಾಗುತ್ತದೆ ಎಂಬುದು ಎಲ್ಲರ ಅಭಿಪ್ರಾಯ. ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರಿಗೆ ಡಿಸಿಎಂ ಹುದ್ದೆ ನೀಡುವ ವಿಚಾರವಾಗಿ ಚರ್ಚೆಗಳನ್ನು ನಡೆಸಲಾಗಿದೆ. ಆದರೆ ಅಂತಿಮ ತೀರ್ಮಾನ ಕೈಗೊಳ್ಳುವುದು ಕಾಂಗ್ರೆಸ್‌ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ತಿಳಿಸಿದರು.

ಇದೇ ವೇಳೆ ರಾಜ್ಯದಲ್ಲಿ ದಲಿತ ಸಿಎಂ ಬೇಕು ಎಂಬ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ಜನವರಿ 28 ರಂದು ಚಿತ್ರದುರ್ಗದಲ್ಲಿ ಶೋಷಿತರ ಸಮಾವೇಶ, ಫೆಬ್ರವರಿಯಲ್ಲಿ ಚಿತ್ರದುರ್ಗದಲ್ಲಿ ಎಸ್‍ಸಿ, ಎಸ್ಟಿ ಸಮಾವೇಶ ಆಯೋಜನೆ ಮಾಡುವ ಚರ್ಚೆಗಳಾಗಿವೆ. ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯ ಬಗ್ಗೆ ಯಾವುದೇ ರೀತಿಯ ಚರ್ಚೆಗಳಾಗಿಲ್ಲ. ಅದು ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕವಷ್ಟೇ ಅದರ ಬಗ್ಗೆ ಮಾತನಾಡುತ್ತೇವೆ. ಸದ್ಯಕ್ಕೆ ಅದರ ಬಗ್ಗೆ ಒತ್ತಡ ಹೇರುವ ಸಂದರ್ಭವೂ ಇಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ