ಸಿದ್ದರಾಮಯ್ಯ ಮತ್ತು ದೇವೇಗೌಡ 
ರಾಜಕೀಯ

'ದಶಕಗಳ ಕಾಲ ಜಾತ್ಯಾತೀತತೆ ಕಿರೀಟ ಹೊತ್ತಿದ್ದ ಗೌಡರು ಇಳಿ ವಯಸ್ಸಿನಲ್ಲಿ ಕೋಮುವಾದ ಕಿರೀಟ ಧರಿಸಿರುವುದು ಸಂಘ ದೋಷದ ಫಲ'

ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ಎಚ್.ಡಿ ದೇವೇಗೌಡ  ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ಎಚ್.ಡಿ ದೇವೇಗೌಡ  ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವರ ಅವರು ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ. ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ  ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನುಸರಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು ಎಂದಿದ್ದಾರೆ.

ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. "ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ" ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ಎಚ್ ಡಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು "ಸಂಘ"ದೋಷದ ಫಲ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನನ್ನ ಮತ್ತು ಡಿಕೆ ಶಿವಕುಮಾರ್  ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ  ದೇವೇಗೌಡ  ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ವ್ಯಂಗ್ಯವಾಡಿದ್ದಾರೆ.

ಜಾತ್ಯತೀತ ಜನತಾ ಪಕ್ಷ ಎನ್ನುವುದು "ಬಿಜೆಪಿಯ ಬಿ ಟೀಮ್" ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು  ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ. ಈ ಪಕ್ಷದ ಜಾತ್ಯತೀತ ಮುಖವನ್ನು ನಿಜ ಎಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ. ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ. ಜಾತ್ಯತೀತತೆ ಮತ್ತು ಸೌಹಾರ್ದತೆಯ  ಪರಂಪರೆಯ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT