ಡಿಸಿಎಂ ಡಿ ಕೆ ಶಿವಕುಮಾರ್ 
ರಾಜಕೀಯ

ಮೂವರು ಉಪ ಮುಖ್ಯಮಂತ್ರಿ ಬೇಡಿಕೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ: ಡಿ ಕೆ ಶಿವಕುಮಾರ್

ರಾಜ್ಯದಲ್ಲಿ ಮೂವರು ಸಚಿವರನ್ನು ಉಪಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಬೇಕು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಹೇಳಿದ್ದು, ಈ ಬಗ್ಗೆ ಪಕ್ಷದ ಹೈಕಮಾಂಡ್ ಮಾತ್ರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಉಪ ಮುಖ್ಯಮಂತ್ರಿ...

ಬೆಂಗಳೂರು: ರಾಜ್ಯದಲ್ಲಿ ಮೂವರು ಸಚಿವರನ್ನು ಉಪಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಬೇಕು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಹೇಳಿದ್ದು, ಈ ಬಗ್ಗೆ ಪಕ್ಷದ ಹೈಕಮಾಂಡ್ ಮಾತ್ರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ರಾಜ್ಯದಲ್ಲಿ ಕೇವಲ ಒಬ್ಬರ ಬದಲು ಮೂವರು ಉಪಮುಖ್ಯಮಂತ್ರಿಗಳಾಗಬೇಕು ಎಂದು ಪಟ್ಟು ಹಿಡಿದಿರುವ ರಾಜಣ್ಣ, ಇತ್ತೀಚೆಗೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡಿದೆ. ಹಾಗೆಯೇ ಕರ್ನಾಟಕದಲ್ಲೂ ಮೂರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿದರೆ ಒಳ್ಳೆಯದು ಎಂದು ಹೇಳಿದ್ದಾರೆ.

ರಾಜಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಏಕೈಕ ಡಿಸಿಎಂ ಡಿಕೆ ಶಿವಕುಮಾರ್ ಅವರು, ಇಂತಹ ಪ್ರಶ್ನೆಗಳಿಗೆ ಹೈಕಮಾಂಡ್ ಮಾತ್ರ ಉತ್ತರಿಸಬಲ್ಲದು. ನಾನು ಅದಕ್ಕೆ ಉತ್ತರಿಸಲಾರೆ. ಅದು ಚರ್ಚಿಸಬೇಕಾದ ವಿಷಯವಲ್ಲ. ಲೋಕಸಭೆ ಚುನಾವಣೆ ಗೆಲ್ಲಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಅಷ್ಟೆ ಎಂದಿದ್ದಾರೆ.

ಇನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಕೂಡ ಇದು ರಾಜಣ್ಣನವರ ವೈಯಕ್ತಿಕ ದೃಷ್ಟಿಕೋನವೇ ಹೊರತು ಪಕ್ಷದದ್ದಲ್ಲ. ಜನ ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾರೆ ಎಂದು ಹೇಳಿದ್ದಾರೆ. 

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು, ರಾಜಣ್ಣ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ. ರಾಜಣ್ಣ ಅವರು ಹಿರಿಯ ನಾಯಕರಾಗಿದ್ದು, ರಾಜಕೀಯ ದೃಷ್ಠಿಯಿಂದ ಅವರು ಹಲವು ಡಿಸಿಎಂ ಹುದ್ದೆ ಬಗ್ಗೆ ಮಾತನಾಡಿದ್ದಾರೆ. ಅವರ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕೇ ಎಂಬುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 3 ವರ್ಷ ವಯೋಮಿತಿ ಸಡಿಲಿಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಟ್ರಂಪ್ ಹುಚ್ಚಾಟ: ಇದೀಗ ವಿದೇಶಿ ಸಿನಿಮಾಗಳ ಮೇಲೆ ಶೇ. 100ರಷ್ಟು ಸುಂಕ; ಕಾಂತಾರ 2 ಚಿತ್ರದ ಕಥೆಯೇನು?

New Drama! ಭಾರತಕ್ಕೆ ಏಷ್ಯಾ ಕಪ್‌ ನೀಡಲು ಹೊಸ ಷರತ್ತು ಹಾಕಿದ ನಖ್ವಿ, ಹೇಳಿದ್ದೇನು?

'Naqvi vs 3rd umpire': ಭಾರತ ಕ್ರಿಕೆಟ್ ತಂಡ ಅಭಿನಂದಿಸದ ಕಾಂಗ್ರೆಸ್; ಬಿಜೆಪಿ ಟೀಕೆಗೆ ಹೆಂಗಿದೆ ತಿರುಗೇಟು?

Ceasefire offer: ನಕ್ಸಲೀಯರೊಂದಿಗೆ 'ಕದನ ವಿರಾಮ' ಘೋಷಣೆಗೆ ಕೇಂದ್ರ ಸರ್ಕಾರವೇಕೆ ಒಪ್ಪುತ್ತಿಲ್ಲ?- ಡಿ. ರಾಜಾ

SCROLL FOR NEXT