ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ 
ರಾಜಕೀಯ

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣವನ್ನು ರಾಜ್ಯ ಸರ್ಕಾರ ದುರ್ಬಲಗೊಳಿಸುತ್ತಿದೆ: ಪ್ರಹ್ಲಾದ ಜೋಶಿ

ಡಿಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿ ಹಿಂಸಾಚಾರ ಪ್ರಕರಣವನ್ನು ದುರ್ಬಲಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪಿಸಿದ್ದಾರೆ.

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿ ಹಿಂಸಾಚಾರ ಪ್ರಕರಣವನ್ನು ದುರ್ಬಲಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪಿಸಿದ್ದಾರೆ.

ಶಿಗ್ಗಾವ ತಾಲ್ಲೂಕಿನ ತಡಸ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ವಿಕಸಿತ ಭಾರತ ಮಾಡಲು ಹೊರಟರೆ ರಾಜ್ಯ ಕಾಂಗ್ರೆಸ್ ನವರು ತುಷ್ಟೀಕರಣ ರಾಜಕಾರಣ ಮೂಲಕ ಸಂಕುಚಿತ ಭಾರತ ಮಾಡಲು ಹೊರಟಿದ್ದಾರೆಂದು ವಾಗ್ದಾಳಿ ನಡೆಸಿದರು.

 ಡಿಜೆ ಹಳ್ಳಿ ಮತ್ತು ಕೆಜಿಹಳ್ಳಿ ಪ್ರಕರಣದ ಆರೋಪಿಗಳನ್ನು ಅಮಾಯಕರು ಎಂದು ಹೇಳಿಕೆ ನೀಡುತ್ತಾರೆ. ಇದನ್ನು ನೋಡಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲಿಬಾನ್ ರೀತಿ ಸರ್ಕಾರ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಭಾರತೀಯರ ರಕ್ತ ಮತ್ತು ಪರಂಪರೆಯಲ್ಲಿ ಪ್ರಜಾಪ್ರಭುತ್ವವಿದೆ. ಈ ರೀತಿ ಮಾಡಲು ಹೋದರೆ ಜನರು ನಿಮ್ಮನ್ನು ಎಲ್ಲಿಗೆ ಸೇರಿಸಬೇಕೋ ಅಲ್ಲಿಗೆ ಸೇರಿಸುತ್ತಾರೆ ಎಂದು ಕಿಡಿಕಾರಿದರು.

ಹುಬ್ಬಳ್ಳಿಯ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಮೇಲೆ 16 ಕೇಸ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಮೇಲೆ ಒಂದೂ ಕೇಸ್ ಇಲ್ಲ. ನೀವು ಕ್ಷಮೆ ಕೇಳುತ್ತೀರಾ? 16 ಕೇಸ್ ಎಂದು ಯಾರು ವರದಿ ನೀಡಿದ್ದಾರೋ ಅವರ ಮೇಲೆ ಯಾವ ಕ್ರಮ ಕೈಗೊಳ್ಳುತ್ತೀರಿ? ಎಂದು ಸಿಎಂಗೆ ಪ್ರಶ್ನಿಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಅನ್ಯಾಯದ ವಿರುದ್ಧ ದನಿ ಎತ್ತಿದವರ ಮೇಲೆ ಕೇಸ್ ಹಾಕಿದ್ದಾರೆ. ಈ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಅಧಿಕಾರಕ್ಕೆ ಬಂದ ಏಳೇ ತಿಂಗಳಲ್ಲಿ ಸರ್ಕಾರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಅಧಿಕಾರದ ಮದ ಏರಿದೆ. ಅನ್ಯಾಯದ ವಿರುದ್ದ ಹೋರಾಟ ಮಾಡಿದರೆ ಅವರ ವಿರುದ್ಧ ಕೇಸ್ ಹಾಕುತ್ತಿದ್ದಾರೆ. ಈ ಸರ್ಕಾರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT