ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ 
ರಾಜಕೀಯ

224 ಕ್ಷೇತ್ರಗಳಲ್ಲೂ ಸಿಎಂ, ಡಿಸಿಎಂ ಘೋಷಿಸಿ: ಕಾಂಗ್ರೆಸ್ ನಾಯಕರ ಬಗ್ಗೆ ಈಶ್ವರಪ್ಪ ಲೇವಡಿ 

ಆಡಳಿತಾರೂಢ ಪಕ್ಷದಲ್ಲಿ ಇನ್ನೂ ಹೆಚ್ಚಿನ ಡಿಸಿಎಂ ಹುದ್ದೆ  ಸೃಷ್ಟಿಸಬೇಕೆಂಬ ವಿಚಾರವಾಗಿ ನಡೆಯುತ್ತಿರುವ ಜಟಾಪಟಿ ನಡೆಯುತ್ತಿರುವುದರ ಬಗ್ಗೆ ಬಿಜೆಪಿ ನಾಯಕ ಈಶ್ವರಪ್ಪ ಲೇವಡಿ ಮಾಡಿದ್ದಾರೆ. 

ಬೆಂಗಳೂರು: ಆಡಳಿತಾರೂಢ ಪಕ್ಷದಲ್ಲಿ ಇನ್ನೂ ಹೆಚ್ಚಿನ ಡಿಸಿಎಂ ಹುದ್ದೆ  ಸೃಷ್ಟಿಸಬೇಕೆಂಬ ವಿಚಾರವಾಗಿ ನಡೆಯುತ್ತಿರುವ ಜಟಾಪಟಿ ನಡೆಯುತ್ತಿರುವುದರ ಬಗ್ಗೆ ಬಿಜೆಪಿ ನಾಯಕ ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಸಂವಿಧಾನಕ್ಕೆ ತಿದ್ದುಪಡಿ ತಂದು ಎಲ್ಲಾ 224 ಕ್ಷೇತ್ರಗಳಲ್ಲೂ ಸಿಎಂ, ಡಿಸಿಎಂ ಗಳನ್ನು ನೇಮಕ ಮಾಡಿ ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ನಾಯಕರು ಕೇವಲ ತೋರಿಕೆಗಾಗಿ ದಲಿತರ ಮೇಲೆ ಪ್ರೀತಿ ತೋರುತ್ತಾರೆ. ಪ್ರಧಾನಿ ಅಭ್ಯರ್ಥಿ ವಿಚಾರದಲ್ಲಿ ರಾಹುಲ್ ಪರ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಖರ್ಗೆ ಪರ ಯಾಕೆ ಮಾತಾಡಲಿಲ್ಲ? ಅವರ ಹೆಸರನ್ನು ಹೇಳಲಿಲ್ಲ? ಎಂದು ಪ್ರಶ್ನಿಸಿದ್ದಾರೆ. 

ಕಾಂಗ್ರೆಸ್ ನಲ್ಲಿ ಮೂರು ಜನ ನಾಯಕರಿದ್ದರೆ, ನಾಲ್ಕು ವಿಚಾರಗಳಲ್ಲಿ ಜಗಳವಿರುತ್ತದೆ. ಹಿಜಬ್ ಕೇಸ್ ವಾಪಸ್ ಪಡೆಯಲು ಯಾರು ಮನವಿ ಮಾಡಿದ್ದರು? ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿ ಇರುವುದಿಲ್ಲ ಎಂದು ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. 

ಕಾಂಗ್ರೆಸ್ ನಾಯಕರು ರಾಮಮಂದಿರದ ಮಂತ್ರಾಕ್ಷತೆ ವಿಷಯದಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದು, ಮಂತ್ರಾಕ್ಷತೆ ಅಕ್ಕಿ ಅನ್ನಭಾಗ್ಯದ್ದಲ್ಲ. ರೈತ ಬೆಳೆದಿದ್ದು. ಡಿಸಿಎಂ ಡಿಕೆ ಶಿವಕುಮಾರ್ ದೇಶದ ಜನರಲ್ಲಿ ಕ್ಷಮೆ ಕೇಳುವುದರ ಜೊತೆಗೆ ಮಂತ್ರಾಕ್ಷತೆ ಪಡೆದು ಅಯೋಧ್ಯೆಗೆ ಬರಬೇಕು ಎಂದು ಆಗ್ರಹಿಸಿದರು. ರಾಮ ಮಂದಿರದ ಆಹ್ವಾನ ಪತ್ರಿಕೆಯ ಜೊತೆ ನೀಡುತ್ತಿರುವ ಮಂತ್ರಾಕ್ಷತೆಯನ್ನು ರಾಜ್ಯದ ಅನ್ನಭಾಗ್ಯ ಅಕ್ಕಿಯಿಂದ ತಯಾರಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ತಮ್ಮನ್ನು ತಾವು ಹಿಂದುಳಿದ ನಾಯಕ ಎಂದು ಹೇಳುವ ಸಿದ್ದರಾಮಯ್ಯ ಅವಕಾಶ ಸಿಕ್ಕಾಗ ಜಾತಿ ಗಣತಿ ಸಮೀಕ್ಷೆ ಬಿಡುಗಡೆ ಮಾಡುವ ಪ್ರಯತ್ನ ಮಾಡಲಿಲ್ಲ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT