ಸಂಗ್ರಹ ಚಿತ್ರ 
ರಾಜಕೀಯ

ಅನ್ನಭಾಗ್ಯದ ಅಕ್ಕಿಯಿಂದಲೇ ಮಂತ್ರಾಕ್ಷತೆ: ಡಿಕೆಶಿ ಹೇಳಿಕೆಗೆ ಬಿಜೆಪಿ ತೀವ್ರ ಕಿಡಿ

ರಾಜ್ಯ ಸರ್ಕಾರ ನೀಡುತ್ತಿರುವ ಅನ್ನಭಾಗ್ಯ ಅಕ್ಕಿಯನ್ನು ಬಳಸಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರು ಮಂತ್ರಾಕ್ಷತೆ ಹಂಚುತಿದ್ದಾರೆ” ಎಂಬ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ತೀವ್ರ ಕಿಡಿಕಾರಿದೆ.

ಬೆಂಗಳೂರು: ರಾಜ್ಯ ಸರ್ಕಾರ ನೀಡುತ್ತಿರುವ ಅನ್ನಭಾಗ್ಯ ಅಕ್ಕಿಯನ್ನು ಬಳಸಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರು ಮಂತ್ರಾಕ್ಷತೆ ಹಂಚುತಿದ್ದಾರೆ” ಎಂಬ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ತೀವ್ರ ಕಿಡಿಕಾರಿದೆ.

ಡಿಕೆ.ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ಅನ್ನಭಾಗ್ಯ ಯೋಜನೆಯಡಿ ಕೇಂದ್ರದಿಂದ 5 ಕೆಜಿ ಅಕ್ಕಿ ವಿತರಣೆಯಾಗುತ್ತಿದೆ ಎಂಬುದನ್ನು ಶಿವಕುಮಾರ್ ಮರೆತಿರಬಹುದು. ಹಾಗಾಗಿ ಅಕ್ಕಿ ವಿತರಿಸಿದ ಸಂಪೂರ್ಣ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲಬೇಕು ಎಂದು ತಿರುಗೇಟು ನೀಡಿದರು.

ಇದಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಧ್ವನಿಗೂಡಿಸಿದ್ದು, ಡಿಬಿಟಿ ವ್ಯವಸ್ಥೆ ಮೂಲಕ 5 ಕೆಜಿ ಅಕ್ಕಿಗೆ ನಗದು ಜಮಾ ಮಾಡುವುದಾಗಿ ಘೋಷಿಸಿರುವ ಕಾಂಗ್ರೆಸ್ ಸರ್ಕಾರ ಒಂದು ಕಾಳು ಅಕ್ಕಿ ನೀಡುತ್ತಿಲ್ಲ ಎಂಬುದು ನಿಸ್ಸಂದೇಹವಾಗಿ ಇದರಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.

ಉಳಿದ 5 ಕೆಜಿ ಅಕ್ಕಿಯನ್ನು ಕೇಂದ್ರ ಸರ್ಕಾರ ವಿತರಿಸುತ್ತಿದೆ ಎಂಬುದನ್ನು ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರವೇ ಇದನ್ನು ಘೋಷಣೆ ಮಾಡಿದೆ. ಹಾಗಾಗಿ, ರಾಜ್ಯದ ಅಕ್ಕಿಯನ್ನು ದುರುಪಯೋಗಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಜನವರಿ 22 ರಂದು ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸುವಂತೆ ಮುಜರಾಯಿ ಇಲಾಖೆ ಆದೇಶ ಹೊರಡಿಸಿರುವ ಕುರಿತು ಪ್ರತಿಕ್ರಿಯಿಸಿ, ಉಪಮುಖ್ಯಮಂತ್ರಿ ತಮ್ಮನ್ನು ‘ರಾಮಭಕ್ತ’ ಎಂದು ಕರೆದುಕೊಳ್ಳುತ್ತಿರುವುದು ಹಾಗೂ ವಿಶೇಷ ಪೂಜೆಗೆ ವ್ಯವಸ್ಥೆ ಮಾಡುತ್ತಿರುವ ಸರ್ಕಾರ ಶ್ರೀರಾಮನ ಮುಂದೆ ಶರಣಾಗಿದಂತಾಗಿದೆ ಎಂದು ಕರೆಯಬಹುದು ಎಂದು ಹೇಳಿದರು.

ಡಿಕೆಶಿ ಹೇಳಿದ್ದೇನು?
ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ನಮ್ಮನ್ನ ಕರೆದಿಲ್ಲ ಎಂದು ಸೋಮವಾರ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದ್ದರು.

ಮುಖ್ಯಮಂತ್ರಿಗಳನ್ನು ಸಹ ಕರೆದಿಲ್ಲ. ನಾನು ಶಿವ ಭಕ್ತ, ಆಂಜನೇಯನ ಮೂರ್ತಿ ಇಲ್ಲಿದೆ ನೋಡಿ. ಎಲ್ಲಾ ದೇವರುಗಳು ನನ್ನ ಹೃದಯದಲ್ಲಿದೆ. ಅರಿಶಿನ ಅಕ್ಕಿ ಸೇರಿಯೇ ಮಂತ್ರಾಕ್ಷತೆಯಾಗುವುದು. ನಮ್ಮ ಅನ್ನಭಾಗ್ಯ ಯೋಜನೆಯಿಂದಲೇ ಅಕ್ಷತೆ ಆಗುತ್ತಿದೆ ಎಂಬುದು ಸಂತೋಷದ ವಿಚಾರ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT