ರಣ್ದೀಪ್ ಸಿಂಗ್ ಸುರ್ಜೇವಾಲಾ 
ರಾಜಕೀಯ

ಅಗತ್ಯಬಿದ್ದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿ: ಕಳ್ಳಾಟವಾಡುತ್ತಿದ್ದ ಸಚಿವರಿಗೆ ಖಡಕ್ ವಾರ್ನಿಂಗ್!

ಅಗತ್ಯ ಬಿದ್ದರೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ.

ಬೆಂಗಳೂರು: ಅಗತ್ಯ ಬಿದ್ದರೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಂಜೆ ಕೆಲವು ಸಚಿವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಹಲವು ಕ್ಷೇತ್ರಗಳಲ್ಲಿ "ಗೆಲ್ಲಬಲ್ಲ" ಅಭ್ಯರ್ಥಿಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಲಾಗುತ್ತದೆ, ಹೀಗಾಗಿ ಕೆಹೆಚ್ ಮುನಿಯಪ್ಪ (ಏಳು ಬಾರಿ ಕೋಲಾರ ಸಂಸದ), ಕೆಎನ್ ರಾಜಣ್ಣ ಮತ್ತು ಬಿ ನಾಗೇಂದ್ರ ಅವರಂತಹ ಸಚಿವರನ್ನು ಕಣಕ್ಕಿಳಿಸಲು ಪಕ್ಷ ಮುಂದಾಗಬಹುದು ಎಂದು ತಿಳಿದು ಬಂದಿದೆ. ಅಂತಹ ಪರಿಸ್ಥಿತಿ ಎದುರಾದರೆ, ಸಚಿವರು ಸ್ಪರ್ಧಿಸಬೇಕಾಗುತ್ತದೆ ಎಂದು ಸೂಚಿಸಲಾಗಿದೆ.

2019 ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಕೃಷ್ಣ ಬೈರೇಗೌಡ ಸ್ಪರ್ಧಿಸಿದ್ದನ್ನು ಸುರ್ಜೇವಾಲಾ ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ. ಆಗ ಗೌಡರು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು ಲೋಕಸಭೆ ಚುನಾವಣೆಗೆ ಕಣಕ್ಕಿಳಿದಿದ್ದರು. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಮೂಡ್ ಇಲ್ಲದ ಸಚಿವರಿಗೆ ಸುರ್ಜೇವಾಲಾ ಅವರ ಎಚ್ಚರಿಕೆ ಆಘಾತ ತಂದಿದೆ ಎನ್ನಲಾಗಿದೆ.

ಕಾಂಗ್ರೆಸ್ ರಾಜ್ಯದ ಪ್ರತಿ ಲೋಕಸಭೆ ಕ್ಷೇತ್ರಕ್ಕೆ 28 ಸಚಿವರನ್ನು ಸಂಯೋಜಕರನ್ನಾಗಿ ನೇಮಿಸಿದ ಎರಡು ದಿನಗಳ ನಂತರ ಸುರ್ಜೇವಾಲಾ ಅವರಿಂದ ಸಂದೇಶ ಬಂದಿದ್ದು ಬಂದಿದೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಚಿವರುಗಳ ಬಗ್ಗೆ ಚರ್ಚೆ ಇನ್ನೂ ನಡೆಯುತ್ತಿದೆ. ನವದೆಹಲಿಯಲ್ಲಿ ಅಂತಿಮ ಸ್ಪಷ್ಟತೆ ಸಿಗಬಹುದು ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ