ಸಂಸದ ಪ್ರತಾಪ್ ಸಿಂಹ 
ರಾಜಕೀಯ

ಮೈಸೂರು: ಯತೀಂದ್ರ ಸ್ಪರ್ಧಿಸಿದರೆ ಸಿಎಂ ಪುತ್ರ- ಪತ್ರಕರ್ತನ ನಡುವೆ ಫೈಟ್; ಪ್ರತಾಪ್ ಸಿಂಹ

ಲೋಕಸಭೆ ಚುನಾವಣೆಯಲ್ಲಿ ನನಗೆ ಎದುರಾಳಿಯಾಗಿ ಯತೀಂದ್ರ ಸ್ಪರ್ಧಿಸಿದರೆ ಒಳ್ಳೆಯದು ಎಂದು  ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ನನಗೆ ಎದುರಾಳಿಯಾಗಿ ಯತೀಂದ್ರ ಸ್ಪರ್ಧಿಸಿದರೆ ಒಳ್ಳೆಯದು ಎಂದು  ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು,  ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ – ಪತ್ರಕರ್ತನ ನಡುವೆ ಫೈಟ್ ನಡೆಯುತ್ತದೆ. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ಗೆ ಅಭ್ಯರ್ಥಿಗಳಿಲ್ಲ. ಮಂತ್ರಿಗಳನ್ನು ಚುನಾವಣೆಗೆ ನಿಲ್ಲಿಸುವ ದಯನೀಯ ಸ್ಥಿತಿಗೆ ಬಂದಿದೆ. ನಮ್ಮಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಗೊಂದಲ ಇಲ್ಲ. ನನ್ನ ಪರ ಎರಡು ಪಕ್ಷದ ನಾಯಕರ ಆಶೀರ್ವಾದವಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

ರಾಮ ಜನ್ಮಭೂಮಿಗಾಗಿ ರಥಯಾತ್ರೆ ಮಾಡಿದವರು ಎಲ್​ಕೆ ಅಡ್ವಾಣಿ. ಕಾನೂನು ಹೋರಾಟ ಮಾಡಿದವರು ರವಿಶಂಕರ್ ಪ್ರಸಾದ್. ನಂತರ ದೇಶಾದ್ಯಂತ ಈ ಬಗ್ಗೆ ಅಭಿಪ್ರಾಯ ಮೂಡಿಸಿದವರು ಪ್ರಧಾನಿ ಮೋದಿ. ಅಡ್ವಾಣಿಯಿಂದ ಮೋದಿವರೆಗೆ ರಾಮ ಜನ್ಮಭೂಮಿ ವಿಚಾರದಲ್ಲಿ ಬಿಜೆಪಿ ಪಾತ್ರ ದೊಡ್ಡದಿದೆ. ರಾಮ ಜನ್ಮಭೂಮಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ್ದು ಯಾವ ಪಾತ್ರವೂ ಇಲ್ಲ. ಹೀಗಾಗಿ ಅವರಿಗೆ ಅಪರಾಧಿ ಪ್ರಜ್ಞೆ ಇದೆ. ಅಪರಾಧಿ ಪ್ರಜ್ಞೆ ಕಾರಣ ಅವರು ಉದ್ಘಾಟನೆಯಿಂದ ಹಿಂದೆ ಸರಿದಿದ್ದಾರೆ ಎಂದು ಅವರು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT