ದಿನೇಶ್ ಗುಂಡೂರಾವ್, ಅನಂತ್ ಕುಮಾರ್ ಹೆಗಡೆ 
ರಾಜಕೀಯ

ಅನಂತ್ ಕುಮಾರ್ ಹೆಗಡೆ ಸಮಾಜದ ಸ್ವಾಸ್ಥ್ಯಕೆಡಿಸುವ ಕೆಟ್ಟ ಹುಳು ಇದ್ದಂತೆ: ದಿನೇಶ್ ಗುಂಡೂರಾವ್

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಮಗನೇ' ಎಂದು ಸಂಬೋಧಿಸಿರುವ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಮಗನೇ' ಎಂದು ಸಂಬೋಧಿಸಿರುವ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಸರಣಿ ಟ್ವೀಟ್ ಮಾಡಿದ್ದು, 'ಕುಲವಂ ನಾಲಗೆ ನುಡಿಯಿತು' ಎಂಬಂತೆ ಉತ್ತರ ಕನ್ನಡ ಸಂಸದರ ಸಂಸ್ಕಾರ ಅವರ ಮಾತುಗಳಲ್ಲೇ ತಿಳಿಯುತ್ತದೆ. ವಯಸ್ಸಿನಲ್ಲಿ ಹಾಗೂ ಅನುಭವದಲ್ಲಿ ಸಿದ್ದರಾಮಯ್ಯರ ಮುಂದೆ ಅನಂತ್ ಕುಮಾರ್ ಹೆಗಡೆ ಹುಲ್ಲು ಕಡ್ಡಿಗೂ ಸಮಾನರಲ್ಲ. ಶೋಷಿತ ಸಮುದಾಯದ ದ್ವನಿಯಾಗಿರುವ ಸಿದ್ದರಾಮಯ್ಯರನ್ನು ಮತಾಂಧತೆಯ ವಿಷ ತುಂಬಿಕೊಂಡಿರುವ ಹೆಗಡೆ ಏಕವಚನದಲ್ಲಿ 'ಮಗನೇ' ಎಂದಿರುವುದು ಅವರ ಕೊಳಕು ಮನಸ್ಥಿತಿಯ ಅನಾವರಣ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಅನಂತ್ ಕುಮಾರ್ ಹೆಗಡೆ ಹಿಂದೂ ಸಮಾಜದ ಕಳಂಕವಿದ್ದಂತೆ. ವಯಸ್ಸಿನಲ್ಲಿ ಹಿರಿಯರಾದವರಿಗೆ ಮರ್ಯಾದೆ ಕೊಡುವುದು ನಮ್ಮ ಹಿಂದೂ ಧರ್ಮ ಕಲಿಸಿರುವ ಸಂಸ್ಕಾರ.ಅನಂತ್ ಕುಮಾರ್ ಹೆಗಡೆಯವರು ಯಾವ ಧರ್ಮದಿಂದ ಈ ರೀತಿ ಕೊಳಕು ಭಾಷೆ ಮಾತನಾಡುವ ಸಂಸ್ಕಾರ ಕಲಿತಿದ್ದಾರೆ.? ಬಾಯಿ ಬಿಟ್ಟರೆ ಹೊಡಿ, ಬಡಿ, ಕೊಚ್ಚು, ಕೊಲ್ಲು, ದ್ವೇಷ, ಸೇಡು ಎನ್ನುವ ಅನಂತ್ ಕುಮಾರ್ ಹೆಗಡೆಯಂತಹವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಅನಂತ್ ಕುಮಾರ್ ಹೆಗಡೆಯವರೇ, ಸಾರ್ವಜನಿಕವಾಗಿ ಹೇಗೆ ಮಾತಾಡಬೇಕು ಹಾಗೂ ಹೇಗೆ ವರ್ತಿಸಬೇಕು ಎಂಬ ಕನಿಷ್ಟ ಜ್ಞಾನವನ್ನು ದಯವಿಟ್ಟು ಬೆಳೆಸಿಕೊಳ್ಳಿ. ನಿಮ್ಮಂತೆ ಹಿಂದುತ್ವದ ಅಮಲು ತುಂಬಿಕೊಂಡಿರುವ ಕೆಲವರಿಗೆ ಮಾತ್ರ ನಿಮ್ಮ ಅಸಹ್ಯದ ಮಾತುಗಳು ರುಚಿಸಬಹುದೇನೋ.? ಆದರೆ ಪ್ರಜ್ಞಾವಂತ ಹಿಂದೂಗಳು ಯಾವತ್ತಿಗೂ ನಿಮ್ಮ ಮಾತು ಒಪ್ಪಲಾರರು. ಬಸವಣ್ಣ, ಕುವೆಂಪು, ನಾರಾಯಣ ಗುರು ಹಾಗೂ ಕನಕದಾಸರಂತಹ ಅನೇಕ ಮಹಾನ್ ವ್ಯಕ್ತಿಗಳು ಬದುಕಿ ಬಾಳಿದ ನೆಲವಿದು. ನಿಮ್ಮ ಕೊಳಕು ಮಾತುಗಳಿಂದ ಈ ನೆಲದ ಪಾವಿತ್ರ್ಯವನ್ನು ಹಾಳು ಮಾಡಬೇಡಿ‌ ಎಂದು ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT