ಅಮಿತ್ ಶಾ ಭೇಟಿಯಾದ ಸೋಮಣ್ಣ 
ರಾಜಕೀಯ

ರಾಜ್ಯಸಭೆಗೆ ಅವಕಾಶ ಮಾಡಿಕೊಡಿ: ಅಮಿತ್ ಶಾ ಬಳಿ ವಿ.ಸೋಮಣ್ಣ ಮನವಿ

ಮಾಜಿ ಸಚಿವ, ಬಿಜೆಪಿ ನಾಯಕ ವಿ.ಸೋಮಣ್ಣ ಅವರು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರನ್ನು ಭೇಟಿಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದೇನೆ ಎಂದು ತಿಳಿಸಿದರು,

ನವದೆಹಲಿ: ಮಾಜಿ ಸಚಿವ, ಬಿಜೆಪಿ ನಾಯಕ ವಿ.ಸೋಮಣ್ಣ ಅವರು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರನ್ನು ಭೇಟಿಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಯಾವುದಾದರೂ 3 ಕ್ಷೇತ್ರಗಳ ಕೆಲಸ ಕೊಡಿ, ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದೇನೆ. ಸಭೆ ಫಲಪ್ರಧವಾದ ವಿಶ್ವಾಸವಿದೆ ಎಂದರು. 

ಸೋಮಣ್ಣ ಚಾಮರಾಜನಗರ ಮತ್ತು ವರುಣಾ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಸೋತಾಗಿನಿಂದ ಅತೃಪ್ತರಾಗಿದ್ದಾರೆ. ಈ ಹಿಂದೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು ಮತ್ತು ಬಿ.ವೈ. ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರು ಇತ್ತೀಚೆಗೆ ತುಮಕೂರಿನಲ್ಲಿ "ಶಕ್ತಿ ಪ್ರದರ್ಶನ" ಸಭೆ ನಡೆಸಿ, ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ ಎಂಬ ಊಹಾಪೋಹ ಹರಿದಾಡಿತ್ತು.ಆದರೆ, ರಾಜ್ಯಸಭೆಯಲ್ಲಿ ಅವಕಾಶ ಕಲ್ಪಿಸುವಂತೆ ಕೋರಿರುವುದಾಗಿ ಸೋಮಣ್ಣ ತಿಳಿಸಿದ್ದಾರೆ. 

ನನ್ನ ಪರಿಸ್ಥಿತಿಯ ಬಗ್ಗೆ ಶಾ ತುಂಬಾ ಸಹಾನುಭೂತಿ ವ್ಯಕ್ತಪಡಿಸಿದರು. ಪಕ್ಷದ ಆದೇಶ ಪಾಲಿಸುವಲ್ಲಿ ನಾನು ಹೇಗೆ ಸೋತಿದ್ದೇನೆ. ನಾನು ಮುಖ್ಯವಾಹಿನಿಯಲ್ಲಿ ಇರಬೇಕು, ಎಲ್ಲ ಹಿರಿಯರನ್ನು ಬಳಸಿಕೊಳ್ಳುವಂತೆ ನೂತನ ಅಧ್ಯಕ್ಷರಿಗೆ ಹೈಕಮಾಂಡ್ ಸೂಚನೆ ನೀಡಿದೆ ಎಂದರು. ಮೂರು ಲೋಕಸಭಾ ಸ್ಥಾನಗಳಿಗೆ ನನ್ನನ್ನು ಉಸ್ತುವಾರಿಯನ್ನಾಗಿ ಮಾಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೇನೆ. ನನ್ನನ್ನು ಮನೆಯಲ್ಲಿ ಕೂರಿಸುವ ಪ್ರಶ್ನೆಯೇ ಇಲ್ಲ ಎಂದು ಶಾ ಹೇಳಿದರು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಅಮಿತ್ ಶಾ ಅವರೊಂದಿಗಿನ ಸಕಾರಾತ್ಮಕ ಭೇಟಿ ನಂತರ ತೃಪ್ತಿಯಾಗಿದೆ. ನಾನು ಎಲ್ಲಾ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ, ಆದರೆ ಕೆಲವು ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ