ಈಶ್ವರಪ್ಪ 
ರಾಜಕೀಯ

ರಾಮಮಂದಿರಕ್ಕೆ ಹೋಗಿ ಪಾಪ ತೊಳೆದುಕೊಂಡು ಬನ್ನಿ: ಸಿಎಂ ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಮಿಷಕ್ಕೊಂದು ಮಾತನಾಡುತ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ, ರಾಮ ಎರಡೂ ಇದೆ. ನೀವೇಕೆ ಬಿಜೆಪಿ ರಾಮಮಂದಿರ ಅಂತ ಅಂದುಕೊಳ್ಳುತ್ತೀರಾ? ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಮಿಷಕ್ಕೊಂದು ಮಾತನಾಡುತ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ, ರಾಮ ಎರಡೂ ಇದೆ. ನೀವೇಕೆ ಬಿಜೆಪಿ ರಾಮಮಂದಿರ ಅಂತ ಅಂದುಕೊಳ್ಳುತ್ತೀರಾ? ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಅನಂತಕುಮಾರ್ ಹೇಳಿರುವುದರಲ್ಲಿ ತಪ್ಪಿಲ್ಲ. ಏಕೆಂದರೆ ಮಂಡ್ಯದ ಶ್ರೀರಂಗಪಟ್ಟಣ, ಕಾರವಾರ ಜಿಲ್ಲೆಯಲ್ಲಿ ದೇವಸ್ಥಾನ ಒಡೆದು ಮಸೀದಿ ಕಟ್ಟಿದ್ದಾರೆ. ಇದನ್ನು ಎಲ್ಲಾ ಭಾರತೀಯರು ಸ್ವಾಗತ ಮಾಡಬೇಕಾ? ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಅವರು ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಾರೆ. ಒಮ್ಮೆ ಅಯೋಧ್ಯೆಗೆ ಹೋಗಲ್ಲ ಅಂದಿದ್ದರು. ಈಗ ಜ.22ರ ನಂತರ ಹೋಗುತ್ತೇನೆ ಎಂದು ಹೇಳುತ್ತಾರೆ. ನಿಮಿಷಕ್ಕೊಂದು ಮಾತನಾಡುತ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ ಹಾಗೂ ರಾಮ ಎರಡೂ ಇದೆ, ರಾಮ ಮಂದಿರಕ್ಕೆ ಹೋಗಿ ನಿಮ್ಮ ಪಾಪ ಕಳೆದುಕೊಂಡು ಬನ್ನಿ ಎಂದು ಟಾಂಗ್ ಕೊಟ್ಟರು.

ನೀವೇಕೆ ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮಮಂದಿರ ಅಂದುಕೊಳ್ಳುತ್ತೀರಾ? ನಾವು ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿಲ್ಲ. ಇಡೀ ವಿಶ್ವದ ಹಿಂದೂಗಳನ್ನು ಒಂದು ಮಾಡಲು ಶ್ರೀರಾಮ ಇರೋದು. ಯಾವ ರೀತಿ ರಾಜಕಾರಣ ಮಾಡುತ್ತಿದ್ದೇವೆ ಎಂಬುದನ್ನು ನೀವು ಹೇಳಿದರೆ, ನಾವು ತಿದ್ದಿಕೊಳ್ಳುವ ಪ್ರಯತ್ನ ಮಾಡುತ್ತೇವೆಂದು ತಿರುಗೇಟು ನೀಡಿದರು.

ಇದೇ ವೇಳೆ ಹಾವೇರಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಹಾವೇರಿಯ ಲಾಡ್ಜ್‌ವೊಂದರಲ್ಲಿ ಮಹಿಳೆಯ ಮೇಲೆ ಏಳು ಜನ ಅತ್ಯಾಚಾರ ಮಾಡಿದ್ದಾರೆ. ಇವರನ್ನು ಮನುಷ್ಯರೆಂದು ಕರೆಯಬೇಕಾ? ಯಾವುದೇ ಧರ್ಮದ ಹೆಣ್ಣು ಮಗಳಾಗಲಿ ಇಂತಹ ನೀಚ ಕೃತ್ಯ ನಡೆಯಬಾರದು. ಗೃಹ ಸಚಿವರು ಇಂತಹ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT