ಗೃಹ ಸಚಿವ ಡಾ.ಜಿ. ಪರಮೇಶ್ವರ್ 
ರಾಜಕೀಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ: ಹೆಗಡೆ ವಿರುದ್ಧ ಸಾಕ್ಷ್ಯಾಧಾರ ಮೇಲೆ ಪೊಲೀಸರು ಕ್ರಮ- ಪರಮೇಶ್ವರ್

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾರವಾರದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಪೊಲೀಸರು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಿದ್ದಾರೆ ಎಂದು  ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾರವಾರದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಪೊಲೀಸರು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಿದ್ದಾರೆ ಎಂದು  ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳವಾರ ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಹೆಗಡೆ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಆದರೆ, ಹೆಗ್ಗಡೆಯವರ ಬಂಧನ ಸಾಧ್ಯತೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಅಂತಹ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ ಎಂದರು. 

“ಪೊಲೀಸರು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದ್ದಾರೆ. ಸಂಸದರನ್ನು ಬಂಧಿಸಬೇಕೋ ಬೇಡವೋ ಎಂಬುದು ಪೊಲೀಸರ ವಿವೇಚನೆಗೆ ಬಿಟ್ಟ ವಿಚಾರ. ಒಬ್ಬ ವ್ಯಕ್ತಿಯನ್ನು ಬಂಧಿಸಲು ಅಥವಾ ಬಿಡುಗಡೆ ಮಾಡಲು ನಾನು ಮಧ್ಯಪ್ರವೇಶಿಸುವುದಿಲ್ಲ ಮತ್ತು ಅವರಿಗೆ ನಿರ್ದೇಶನ ನೀಡುವುದಿಲ್ಲ. ಹೆಗಡೆ ಅವರ ಮೇಲೆ ಹೊರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸೆಕ್ಷನ್‌ಗಳಲ್ಲಿ ನಿಬಂಧನೆ ಇದ್ದರೆ ಸ್ಥಳೀಯ ಪೊಲೀಸರು ಅವರು ಬಂಧಿಸುತ್ತಾರೆ. ಪರಿಣಾಮಗಳು ಏನೇ ಇರಲಿ, ಅದು ಪೊಲೀಸರ ನಿರ್ಧಾರವಾಗಿರುತ್ತದೆ ಎಂದು ಅವರು ಹೇಳಿದರು.

ರಾಮಮಂದಿರ ಉದ್ಘಾಟನೆಗೆ ಹೋಗುವುದಿಲ್ಲ. ಬಳಿಕ ಅಯೋಧ್ಯೆಗೆ ಭೇಟಿ ನೀಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಹೆಗಡೆ ಖಾರವಾಗಿ ಪ್ರತಿಕ್ರಿಯಿಸಿದ್ದರು. ಸಿದ್ದರಾಮಯ್ಯ ನೀವು ಬರಲಿ, ಬಿಡಲಿ, ರಾಮ ಮಂದಿರ ಉದ್ಘಾಟನೆ ನಿಲ್ಲುವುದಿಲ್ಲ ಮಗನೆ ಎಂದಿದ್ದರು.

ಸಿಎಂ ವಿರುದ್ಧ ಹೆಗಡೆ ಅವಹೇಳನಕಾರಿ ಹೇಳಿಕೆಯಿಂದ ಕರ್ನಾಟಕ ಬಿಜೆಪಿ ಘಟಕ ಅಂತರ ಕಾಯ್ದುಕೊಂಡಿದೆ. ಆದರೆ, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಹೆಗಡೆ, ಸಭ್ಯತೆ ಮತ್ತು ಸಂಸ್ಕೃತಿಯ ವಿಷಯಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ಸಿಎಂ ಬರಲಿ ಎಂದು ಸವಾಲು ಹಾಕಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT