ಡಾ.ಸಿ ಎನ್ ಮಂಜುನಾಥ್ 
ರಾಜಕೀಯ

ಪ್ರಜ್ವಲ್ ರೇವಣ್ಣ ಸೋಲಿನ ಭೀತಿ: ಹಾಸನ ಜೆಡಿಎಸ್ ಲೋಕಸಭಾ ಅಭ್ಯರ್ಥಿಯಾಗಿ ಡಾ. ಸಿ.ಎನ್.ಮಂಜುನಾಥ್ ಸ್ಪರ್ಧೆ? 

ಎರಡು ದಶಕಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸಿ.ಎನ್.ಮಂಜುನಾಥ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಸನ ಅಥವಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬೆಂಗಳೂರು: ಎರಡು ದಶಕಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಸಿ.ಎನ್.ಮಂಜುನಾಥ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಸನ ಅಥವಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಡಾ ಚೋಳೇನಹಳ್ಳಿ ನಂಜಪ್ಪ ಮಂಜುನಾಥ್ (66) ಅವರು ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜನವರಿ 31ಕ್ಕೆ ಅವರ ಅಧಿಕಾರವಧಿ ಅಂತ್ಯವಾಗಲಿದೆ. ಮಂಜುನಾಥ್ ಅವರ ನಿರ್ದೇಶಕ ಸ್ಥಾನದ ಅವಧಿಯನ್ನು  ಹಿಂದಿನ ಬಿಜೆಪಿ ಸರ್ಕಾರ 1 ವರ್ಷಗಳ ಕಾಲ ಮುಂದುವರಿಸಿತ್ತು.  ಮತ್ತೆ ಅವರನ್ನು ಮುಂದಿನ 6 ತಿಂಗಳುಗಳ ಕಾಲ ಸೇವಾವಧಿಯನ್ನು ಕಾಂಗ್ರೆಸ್ ಸರ್ಕಾರ  ವಿಸ್ತರಿಸಿತ್ತು.

ಶಸ್ತ್ರಚಿಕಿತ್ಸಾ ವಿಧಾನ, ಬಲೂನ್ ಮಿಟ್ರಲ್ ವಾಲ್ವುಲೋಪ್ಲ್ಯಾಸ್ಟಿಯಲ್ಲಿ ಅವರ ಸೇವೆಗಾಗಿ ವೈದ್ಯಕೀಯ ವಲಯದಲ್ಲಿ ಅವರಿಗೆ ಅಪಾರ ಗೌರವವಿದೆ. ತಮ್ಮ ಗಣನೀಯ ಸೇವೆಗಾಗಿ 2007 ರಲ್ಲಿ ಪದ್ಮಶ್ರೀ ಪಡೆದರು. ರಾಜಕೀಯವಾಗಿ ಹೇಳುವುದಾದರೆ, ಅವರು ಶ್ರವಣಬೆಳಗೊಳ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಅವರ ಸಹೋದರ. ಮಂಜುನಾಥ್ ಅವರ ಪತ್ನಿ ಅನಸೂಯಾ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಹಿರಿಯ ಪುತ್ರಿ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈ ಬಾರಿ ಗೆಲುವು ಕಷ್ಟವಾಗಬಹುದು ಎಂದು ಮೂಲಗಳು ತಿಳಿಸಿವೆಯಾದ್ದರಿಂದ ಮಂಜುನಾಥ್ ಅವರ ಹೆಸರು ಕೇಳಿಬರುತ್ತಿದೆ ಎಂದು ಹೇಳಲಾಗುತ್ತಿದೆ.

ಮಾಜಿ ಪ್ರಧಾನಿ ಎಚ್ .ಡಿ ದೇವೇಗೌಡರ ಕುಟುಂಬದಿಂಗ ಈಗಾಗಲೇ ಇಬ್ಬರು ಶಾಸಕ, ಒಬ್ಬ ಎಂಎಲ್‌ಸಿ ಮತ್ತು ಒಬ್ಬ ಲೋಕಸಭಾ ಸದಸ್ಯರನ್ನು ಹೊಂದಿದ್ದು, ಭವಾನಿ ಜಿಪಿ ಸದಸ್ಯೆಯಾಗಿದ್ದು ಕೆಆರ್ ನಗರ ವಿಧಾನಸಭೆ ಸ್ಥಾನದ ಆಕಾಂಕ್ಷಿಯಾಗಿದ್ದರು.

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮತ್ತು ಅವರ ಹಿರಿಯ ಸಹೋದರ ಎಚ್‌ಡಿ ರೇವಣ್ಣ ಸಹೋದರರ ನಡುವಿನ ಸಂಬಂಧ ಹದಗೆಟ್ಟಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಸಂಬಂಧ ಡಾ. ಮಂಜುನಾಥ್ ಅವರನ್ನು ಸಂಪರ್ಕಿಸಿದಾಗ, ಅವರು ರಾಜಕೀಯ ವೃತ್ತಿಜೀವನದ ಬಗ್ಗೆ ಆಸಕ್ತಿಯಿಲ್ಲ ಎಂದು ಹೇಳಿದರು, ಆದರೂ ಗೌಡರ ಕುಟುಂಬದ ನಿರ್ಧಾರವು ಮೇಲುಗೈ ಸಾಧಿಸುತ್ತದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT