ದೇವೇಗೌಡ 
ರಾಜಕೀಯ

ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದಾರೆ: ಎಚ್‌ಡಿ ದೇವೇಗೌಡ

ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ ಹೇಳಿದರು.

ಬೇಲೂರು: ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ ಹೇಳಿದರು.

ಬೇಲೂರಿನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ವೈಯಕ್ತಿಕ ಹಿತಾಸಕ್ತಿಯಿಂದ ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ. ದೇಶದ 150 ಕೋಟಿ ಜನರಿಗಾಗಿ ಮೋದಿಜತೆ ಸಂಬಂಧ ಬೆಳೆಸಿದ್ದೇನೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಎಷ್ಟುಸೀಟು ಕೊಡುತ್ತಾರೆ ಎಂಬುದು ಮುಖ್ಯವಲ್ಲ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವುದು ಮುಖ್ಯ. ಮೋದಿಯವರು 10 ವರ್ಷದಲ್ಲಿ ಅಯೋಧ್ಯೆ, ಕಾಶಿ ಗಂಗಾನದಿಯ ಸ್ವರೂಪವನ್ನು ಬದಲಿಸಿ ರಸ್ತೆಗಳನ್ನು ಕ್ರಾಂತಿಕಾರಿ ಮಾಡಿದ್ದಾರೆ. ಸಮಾಜದ ಎಲ್ಲಾ ವರ್ಗಗಳಿಗೆ ನ್ಯಾಯ ಒದಗಿಸುತ್ತಿದ್ದಾರೆ. ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದಾರೆಂದು ಕೊಂಡಾಡಿದರು.

ಬಳಿಕ ಮೋದಿಯನ್ನು ಬೆಂಬಲಿಸುವಂತೆ ಜೆಡಿಎಸ್ ಕಾರ್ಯಕರ್ತರನ್ನು ಒತ್ತಾಯಿಸಿದ ಅವರು, ವಿಪಕ್ಷಗಳ ಮೈತ್ರಿಕೂಟ ಇಂಡಿಯಾದಲ್ಲಿರುವ ನಾಯಕರಿಗೆ ಮೋದಿಯವರಿಗಿರುವ ಸಾಮರ್ಥ್ಯವಿಲ್ಲ. ಕಾಂಗ್ರೆಸ್ ಮತ್ತು ಅದರ ನಾಯಕರ ಬಗ್ಗೆ ಮಾತನಾಡಲು ಸಾಕಷ್ಟು ಇದೆ, ನಮ್ಮ ಪಕ್ಷವನ್ನು ಉಳಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ನಾನು ವಿಶ್ರಮಿಸುವುದಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ಸಾಮಾನ್ಯ ಜನರು ಮತ್ತು ರೈತರ ಹಿತಾಸಕ್ತಿಗಳಿಗಾಗಿ ಹೋರಾಟವನ್ನು ಮುಂದುವರೆಸುತ್ತೇನೆ ಎಂದು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಇಂದು ಗಾಂಧಿ, ನೆಹರು ಕಾಂಗ್ರೆಸ್‌ ಆಗಿ ಉಳಿದಿಲ್ಲ, ಬೇಕಾದಾಗ ಉಪಯೋಗಿಸಿಕೊಂಡು ಬೇಡ ಎಂದಾಗ ಕಸದಂತೆ ಎಸೆಯುತ್ತಾರೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಗ್ಯಾರಂಟಿಗಳು ಎಲ್ಲಿ ಹೋಗುತ್ತವೆಯೋ ತಿಳಿಯದು ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT