ದೇವೇಗೌಡ 
ರಾಜಕೀಯ

ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದಾರೆ: ಎಚ್‌ಡಿ ದೇವೇಗೌಡ

ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ ಹೇಳಿದರು.

ಬೇಲೂರು: ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ ಹೇಳಿದರು.

ಬೇಲೂರಿನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ವೈಯಕ್ತಿಕ ಹಿತಾಸಕ್ತಿಯಿಂದ ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ. ದೇಶದ 150 ಕೋಟಿ ಜನರಿಗಾಗಿ ಮೋದಿಜತೆ ಸಂಬಂಧ ಬೆಳೆಸಿದ್ದೇನೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಎಷ್ಟುಸೀಟು ಕೊಡುತ್ತಾರೆ ಎಂಬುದು ಮುಖ್ಯವಲ್ಲ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವುದು ಮುಖ್ಯ. ಮೋದಿಯವರು 10 ವರ್ಷದಲ್ಲಿ ಅಯೋಧ್ಯೆ, ಕಾಶಿ ಗಂಗಾನದಿಯ ಸ್ವರೂಪವನ್ನು ಬದಲಿಸಿ ರಸ್ತೆಗಳನ್ನು ಕ್ರಾಂತಿಕಾರಿ ಮಾಡಿದ್ದಾರೆ. ಸಮಾಜದ ಎಲ್ಲಾ ವರ್ಗಗಳಿಗೆ ನ್ಯಾಯ ಒದಗಿಸುತ್ತಿದ್ದಾರೆ. ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದಾರೆಂದು ಕೊಂಡಾಡಿದರು.

ಬಳಿಕ ಮೋದಿಯನ್ನು ಬೆಂಬಲಿಸುವಂತೆ ಜೆಡಿಎಸ್ ಕಾರ್ಯಕರ್ತರನ್ನು ಒತ್ತಾಯಿಸಿದ ಅವರು, ವಿಪಕ್ಷಗಳ ಮೈತ್ರಿಕೂಟ ಇಂಡಿಯಾದಲ್ಲಿರುವ ನಾಯಕರಿಗೆ ಮೋದಿಯವರಿಗಿರುವ ಸಾಮರ್ಥ್ಯವಿಲ್ಲ. ಕಾಂಗ್ರೆಸ್ ಮತ್ತು ಅದರ ನಾಯಕರ ಬಗ್ಗೆ ಮಾತನಾಡಲು ಸಾಕಷ್ಟು ಇದೆ, ನಮ್ಮ ಪಕ್ಷವನ್ನು ಉಳಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ನಾನು ವಿಶ್ರಮಿಸುವುದಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ಸಾಮಾನ್ಯ ಜನರು ಮತ್ತು ರೈತರ ಹಿತಾಸಕ್ತಿಗಳಿಗಾಗಿ ಹೋರಾಟವನ್ನು ಮುಂದುವರೆಸುತ್ತೇನೆ ಎಂದು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಇಂದು ಗಾಂಧಿ, ನೆಹರು ಕಾಂಗ್ರೆಸ್‌ ಆಗಿ ಉಳಿದಿಲ್ಲ, ಬೇಕಾದಾಗ ಉಪಯೋಗಿಸಿಕೊಂಡು ಬೇಡ ಎಂದಾಗ ಕಸದಂತೆ ಎಸೆಯುತ್ತಾರೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಗ್ಯಾರಂಟಿಗಳು ಎಲ್ಲಿ ಹೋಗುತ್ತವೆಯೋ ತಿಳಿಯದು ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT