ಡಿಸಿಎಂ ಡಿಕೆ.ಶಿವಕುಮಾರ್ 
ರಾಜಕೀಯ

ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಅಲ್ಲ: ರಜೆಗೆ ಆಗ್ರಹಿಸುತ್ತಿರುವ ಬಿಜೆಪಿಗೆ ಡಿಕೆಶಿ ತಿರುಗೇಟು

ಸಿದ್ದರಾಮಯ್ಯ ಹೆಸರಲ್ಲಿ ರಾಮ, ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ಒತ್ತಡವೂ ಹಾಕಬೇಕಿಲ್ಲ. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಅಲ್ಲ ಎಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರು: ಸಿದ್ದರಾಮಯ್ಯ ಹೆಸರಲ್ಲಿ ರಾಮ, ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ಒತ್ತಡವೂ ಹಾಕಬೇಕಿಲ್ಲ. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಅಲ್ಲ ಎಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದಾದ್ಯಂತ ಈಗಾಗಲೇ ಎಲ್ಲಾ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ರಜೆ ಘೋಷಿಸಿವೆ. ಕರ್ನಾಟಕ ರಾಜ್ಯದಲ್ಲೂ ಕೂಡ ನಾಳೆ ರಜೆ ಘೋಷಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಈ ಆಗ್ರಹ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆ.ಶಿವಕುಮಾರ್ ಅವರು, ನಾವು ಭಕ್ತಿ, ಗೌರವ, ಧರ್ಮ ಪ್ರಚಾರಕ್ಕೆ ಮಾಡುವುದಿಲ್ಲ. ದೇಗುಲಗಳಲ್ಲಿ ಏನು ಆಚರಣೆ ಮಾಡಬೇಕು ಮಾಡುತ್ತಾರೆ. ಏನು ಪೂಜೆ, ಪುನಸ್ಕಾರ ಮಾಡಬೇಕು ಅದನ್ನು ಮಾಡುತ್ತೇವೆ. ನಮಗೆ ಯಾರೂ ಹೇಳುವ ಅವಶ್ಯಕತೆ ಇಲ್ಲ. ಪ್ರಾರ್ಥನೆಗಳಿಂದ ಫಲ ದೊರೆಯುತ್ತೆಂಬ ನಂಬಿಕೆ ನಮಗೆ. ಹಾಗಾಗಿ ಪ್ರಾರ್ಥನೆ ಮಾಡ್ಕೊಳ್ಳಿ ಎಂದು ಹೇಳುತ್ತಿದ್ದೇವೆ.

ಸಿದ್ದರಾಮಯ್ಯ ಹೆಸರಲ್ಲಿ ರಾಮ, ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ಹೇಳಿಕೊಡಬೇಕಿಲ್ಲ, ಒತ್ತಡವೂ ಹಾಕಬೇಕಿಲ್ಲ. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಅಲ್ಲ ಎಂದು ಪರೋಕ್ಷವಾಗಿ ಸರ್ಕಾರಿ ರಜೆ ನೀಡಲು ನಿರಾಕರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ರಜೆ ನೀಡಬೇಕೆಂಬ ಬಿಜೆಪಿಯ ಮನವಿ ಪತ್ರವನ್ನು ಇನ್ನೂ ನೋಡಿಲ್ಲ. ನೋಡುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT