ಡಿಸಿಎಂ ಡಿಕೆ.ಶಿವಕುಮಾರ್ 
ರಾಜಕೀಯ

ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಅಲ್ಲ: ರಜೆಗೆ ಆಗ್ರಹಿಸುತ್ತಿರುವ ಬಿಜೆಪಿಗೆ ಡಿಕೆಶಿ ತಿರುಗೇಟು

ಸಿದ್ದರಾಮಯ್ಯ ಹೆಸರಲ್ಲಿ ರಾಮ, ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ಒತ್ತಡವೂ ಹಾಕಬೇಕಿಲ್ಲ. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಅಲ್ಲ ಎಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರು: ಸಿದ್ದರಾಮಯ್ಯ ಹೆಸರಲ್ಲಿ ರಾಮ, ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ಒತ್ತಡವೂ ಹಾಕಬೇಕಿಲ್ಲ. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಅಲ್ಲ ಎಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದಾದ್ಯಂತ ಈಗಾಗಲೇ ಎಲ್ಲಾ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ರಜೆ ಘೋಷಿಸಿವೆ. ಕರ್ನಾಟಕ ರಾಜ್ಯದಲ್ಲೂ ಕೂಡ ನಾಳೆ ರಜೆ ಘೋಷಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಈ ಆಗ್ರಹ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆ.ಶಿವಕುಮಾರ್ ಅವರು, ನಾವು ಭಕ್ತಿ, ಗೌರವ, ಧರ್ಮ ಪ್ರಚಾರಕ್ಕೆ ಮಾಡುವುದಿಲ್ಲ. ದೇಗುಲಗಳಲ್ಲಿ ಏನು ಆಚರಣೆ ಮಾಡಬೇಕು ಮಾಡುತ್ತಾರೆ. ಏನು ಪೂಜೆ, ಪುನಸ್ಕಾರ ಮಾಡಬೇಕು ಅದನ್ನು ಮಾಡುತ್ತೇವೆ. ನಮಗೆ ಯಾರೂ ಹೇಳುವ ಅವಶ್ಯಕತೆ ಇಲ್ಲ. ಪ್ರಾರ್ಥನೆಗಳಿಂದ ಫಲ ದೊರೆಯುತ್ತೆಂಬ ನಂಬಿಕೆ ನಮಗೆ. ಹಾಗಾಗಿ ಪ್ರಾರ್ಥನೆ ಮಾಡ್ಕೊಳ್ಳಿ ಎಂದು ಹೇಳುತ್ತಿದ್ದೇವೆ.

ಸಿದ್ದರಾಮಯ್ಯ ಹೆಸರಲ್ಲಿ ರಾಮ, ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ಹೇಳಿಕೊಡಬೇಕಿಲ್ಲ, ಒತ್ತಡವೂ ಹಾಕಬೇಕಿಲ್ಲ. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಅಲ್ಲ ಎಂದು ಪರೋಕ್ಷವಾಗಿ ಸರ್ಕಾರಿ ರಜೆ ನೀಡಲು ನಿರಾಕರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ರಜೆ ನೀಡಬೇಕೆಂಬ ಬಿಜೆಪಿಯ ಮನವಿ ಪತ್ರವನ್ನು ಇನ್ನೂ ನೋಡಿಲ್ಲ. ನೋಡುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Sydney Bondi Beach Shooting: ಸಿಡ್ನಿ ಕಡಲತೀರದಲ್ಲಿ ಯಹೂದಿಗಳ ನರಮೇಧ; ಮೃತರ ಸಂಖ್ಯೆ 16ಕ್ಕೆ ಏರಿಕೆ

ಕುರ್ಚಿ ಕದನ ನಡುವಲ್ಲೇ ವರಿಷ್ಠರಿಂದ ಭೋಜನಕೂಟ: ಡಿಕೆಶಿ ಭಾಗಿ, ಹಲವರ ಹುಬ್ಬೇರಿಸಿದ ಸಿದ್ದು ಅನುಪಸ್ಥಿತಿ..!

ಶಾಮನೂರು ಯುಗಾಂತ್ಯ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಖಂಡ್ರೆ ಅಧಿಕಾರ ಸ್ವೀಕಾರ!

2 ವರ್ಷಗಳಲ್ಲಿ ಪಿಲ್ಲರ್‌ ನಿರ್ಮಿಸಲು ಸಾಧ್ಯವಾಗಿಲ್ಲ, ಎರಡು ತಿಂಗಳಲ್ಲಿ ಮ್ಯಾಜಿಕ್‌ ಮಾಡ್ತೀರಾ?: ನಮ್ಮ Metro ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತರಾಟೆ

"Not Out Of Form": ಟಿ-20ಯಲ್ಲಿ ನೀರಸ ಪ್ರದರ್ಶನ, ಫಾರ್ಮ್ ನಲ್ಲಿ ಇಲ್ಲವೇ? ಸೂರ್ಯ ಕುಮಾರ್ ಯಾದವ್ ಸ್ಪಷ್ಟನೆ!

SCROLL FOR NEXT