ಸಿಎಂ ಸಿದ್ದರಾಮಯ್ಯ 
ರಾಜಕೀಯ

'ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿಯ ಬಗ್ಗೆ ನನಗೆ ಕನಿಕರವಿದೆ, ಇನ್ನಾದರೂ ರಾಮನಿಗೆ ಶರಣಾಗಿ'

ಅಂತೂ ಇಂತೂ ತಮ್ಮ ಬಾಯಲ್ಲೂ ರಾಮ ನಾಮ ಹೊರಡುತ್ತಿದೆ. ತೋರಿಕೆಗೊ, ಜನಮೆಚ್ಚುಗೆಗೊ ಅಥವಾ ಸಮಾಜದ ಅಂಜಿಕೆಗೋ, ಒಟ್ಟಿನಲ್ಲಿ ನಿನ್ನೆ ತಾವೂ ಒಂದು ದೇವಸ್ಥಾನಕ್ಕೆ ಹೋಗಿದ್ದೀರಿ. ಇದು ಸಂತೋಷದ ವಿಷಯ.

ಬೆಂಗಳೂರು: ಅಂತೂ ಇಂತೂ ತಮ್ಮ ಬಾಯಲ್ಲೂ ರಾಮ ನಾಮ ಹೊರಡುತ್ತಿದೆ. ತೋರಿಕೆಗೊ, ಜನಮೆಚ್ಚುಗೆಗೊ ಅಥವಾ ಸಮಾಜದ ಅಂಜಿಕೆಗೋ, ಒಟ್ಟಿನಲ್ಲಿ ನಿನ್ನೆ ತಾವೂ ಒಂದು ದೇವಸ್ಥಾನಕ್ಕೆ ಹೋಗಿದ್ದೀರಿ. ಇದು ಸಂತೋಷದ ವಿಷಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಆರ್. ಅಶೋಕ್ ಹರಿಹಾಯ್ದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಿಮ್ಮ ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಯನ್ನ ರಾಮನ ವಿಷಯದಲ್ಲೂ ವಿಸ್ತರಿಸುವ ಪಾಪ ಕಟ್ಟಿಕೊಳ್ಳಬೇಡಿ. ನೀವು ಮಹಾತ್ಮ ಗಾಂಧಿಯವರು ಹೇಳಿದ ರಾಮನ ಭಕ್ತರು ಅಂತ ಹೇಳಿದ್ದೀರಿ. ಮಹಾತ್ಮ ಗಾಂಧಿಯವರು ಗೋಹತ್ಯೆ ನಿಷೇಧದ ಅತ್ಯಂತ ದೊಡ್ಡ ಪ್ರತಿಪಾದಕರಾಗಿದ್ದರು. ಆದರೆ ತಾವು ಗೋಹತ್ಯೆಯ  ಪರ. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವನ್ನ ವಿಸರ್ಜನೆ ಮಾಡಿ ಅಂತ ಗಾಂಧೀಜಿ ಹೇಳಿದ್ದರು. ಆದರೆ ತಾವುಗಳು ಕಾಂಗ್ರೆಸ್ ಪಕ್ಷವನ್ನ ಒಂದು ಕುಟುಂಬದ ಜಹಗೀರು ಮಾಡಿಕೊಟ್ಟುಬಿಟ್ಟಿದ್ದೀರಿ. ಇದೇನಾ ತಮ್ಮ ಗಾಂಧೀವಾದ? ಎಂದು ಪ್ರಶ್ನಿಸಿದ್ದಾರೆ.

ರಾಮ ಸತ್ಯವಂತ. ಕೊಟ್ಟ ಮಾತಿಗೆ ಎಂದೂ ತಪ್ಪದ ವ್ಯಕ್ತಿತ್ವ. ಆದರೆ ತಾವು ಮಾಡಿದ್ದೇನು? ಮಾಡುತ್ತಿರುವುದೇನು? ತಮ್ಮ ಮೊದಲ ಅವಧಿಯಲ್ಲಿ ಜನತೆಗೆ ಕೊಟ್ಟಿದ್ದ ಭರವಸೆಗಳಲ್ಲಿ ಅರ್ಧ ಭಾಗವೂ ಈಡೇರಿಸಲಿಲ್ಲ. ಅದರ ಮೇಲೆ ನುಡಿದಂತೆ ನಡೆದ ಸರ್ಕಾರ ಎಂಬ ಮತ್ತೊಂದು ಸುಳ್ಳು. ಈಗ ಎರಡನೇ ಅವಧಿಯಲ್ಲಿ ತಾವು ಮಾಡುತ್ತಿರುವುದೇನು? ಎಲ್ಲರಿಗೂ 200 ಯೂನಿಟ್ ಕರೆಂಟ್ ಉಚಿತ ಅಂತ ಸುಳ್ಳು ಭರವಸೆ ನೀಡಿ ಕಡೆಗೆ ಸರಾಸರಿ ಎಂದು ವರಸೆ ಬದಲಿಸಿದ್ದೀರಿ. 10 ಕೆಜಿ ಅಕ್ಕಿ ನೀಡುತ್ತೇನೆ ಎಂದು ಹೇಳಿ ಈಗ ಮಾತು ತಪ್ಪಿದ್ದೀರಿ. ರಾಜ್ಯದ ಎಲ್ಲಾ ನಿರುದ್ಯೋಗಿ ಪದವೀಧರರು, ಡಿಪ್ಲೋಮಾ ಪದವೀಧರರಿಗೆ ಯುವನಿಧಿ ಗ್ಯಾರೆಂಟಿ ಅಂತ ಸುಳ್ಳು ಹೇಳಿ ಈಗ ಕಂಡೀಷನ್ ಮೇಲೆ ಕಂಡೀಷನ್ ಹಾಕಿ ಕಡೆಗೆ 3,000 ಯುವಕರು ಮಾತ್ರ ಅರ್ಹರು ಎಂದು ಯುವಕರಿಗೆ ಟೋಪಿ ಹಾಕಿದ್ದೀರಿ ಎಂದು ತಪರಾಕಿ ಹಾಕಿದ್ದಾರೆ.

ತಾವು ರಾಮನ ಭಕ್ತರೂ ಅಲ್ಲ, ಗಾಂಧೀಜಿ ಅವರ ಅನುಯಾಯಿಗಳೂ ಅಲ್ಲ. ತಾವೇನಿದ್ದೇರೂ ಅಧಿಕಾರದ ಅನುಯಾಯಿಗಳು, ಅಧಿಕಾರ ಕೊಡುವ ಹೈಕಮಾಂಡ್ ಭಕ್ತರು. ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿ, ರಾಮ ಮಂದಿರದ ಆಹ್ವಾನ ತಿರಸ್ಕರಿಸಿದ ತಮ್ಮ ಪಕ್ಷಕ್ಕೆ ಶ್ರೀರಾಮನ ಬಗ್ಗೆ, ಕೊಟ್ಟ ಮಾತಿನಂತೆ ರಾಮನ ಮಂದಿರ ನಿರ್ಮಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ  ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಉಳಿದಿಲ್ಲ. ಕನ್ನಡಿಗರ ರಾಮಭಕ್ತಿ, ಹಿಂದೂಗಳ ಒಗ್ಗಟ್ಟು ನೋಡಿ ತಮಗೆ ನಡುಕ ಉಂಟಾಗಿದೆ ಎಂದು ಗೊತ್ತು. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲದಿದ್ದರೆ ಪಾಪ ತಮ್ಮ ಕುರ್ಚಿಗೇ ಕಂಟಕ. ಸಿದ್ದರಾಮಯ್ಯನವರೇ ತಮ್ಮ ಪರಿಸ್ಥಿತಿಯ ಬಗ್ಗೆ ನನಗೆ ಕನಿಕರವಿದೆ. ಇನ್ನಾದರೂ ರಾಮನಿಗೆ ಶರಣಾಗಿ ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT