ಡಿಕೆ ಶಿವಕುಮಾರ್ 
ರಾಜಕೀಯ

ನಾವೇನು ಗುಲಾಮರೇ: ರಾಜಣ್ಣ ಹೇಳಿಕೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ- ಡಿಕೆ ಶಿವಕುಮಾರ್

ದೆಹಲಿಯಲ್ಲಿ ಕುಳಿತು ಪಕ್ಷದ ನಾಯಕರು ಸಿದ್ಧಪಡಿಸಿದ ಪಟ್ಟಿಯನ್ನು ಒಪ್ಪಿಕೊಳ್ಳಲು ನಾವು ಗುಲಾಮರೇ ಎಂಬ ಸಚಿವ ಕೆಎನ್ ರಾಜಣ್ಣ ಅವರ ಹೇಳಿಕೆಯನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

ಬೆಂಗಳೂರು: ದೆಹಲಿಯಲ್ಲಿ ಕುಳಿತು ಪಕ್ಷದ ನಾಯಕರು ಸಿದ್ಧಪಡಿಸಿದ ಪಟ್ಟಿಯನ್ನು ಒಪ್ಪಿಕೊಳ್ಳಲು ನಾವು ಗುಲಾಮರೇ ಎಂಬ ಸಚಿವ ಕೆಎನ್ ರಾಜಣ್ಣ ಅವರ ಹೇಳಿಕೆಯನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

ರಾಜಣ್ಣ ಅವರ ಹೇಳಿಕೆಗೆ ಲೇವಡಿ ಮಾಡುತ್ತಾ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ರಾಜಣ್ಣ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಿಎಂ ಈ ಬಗ್ಗೆ ಮಾತನಾಡಿದ್ದಾರೆ. ಅವರು ಶಾಸಕರು ಮತ್ತು ಸಚಿವರಾಗಿರುವುದರಿಂದ ಎಐಸಿಸಿ ಗೌರವಯುತವಾಗಿ ಪರಿಶೀಲಿಸುತ್ತದೆ ಎಂದು ಹೇಳಿದರು.

ನಿಗಮ-ಮಂಡಳಿ ಮತ್ತು ನಿಗಮಗಳ ಮುಖ್ಯಸ್ಥರ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ನಾಯಕರ ಸಲಹೆ ಪಡೆಯದ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಗೃಹ ಸಚಿವ ಡಾ.ಜಿ.ಪರಮೇಶ್ವರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಕೂಡ ಪಕ್ಷದ ಕೇಂದ್ರ ನಾಯಕರ ವಿರುದ್ಧ ಧ್ವನಿ ಎತ್ತಿದ್ದರು.

ಯಾರು ಕೆಲಸ ಮಾಡುತ್ತಿದ್ದಾರೆ ಮತ್ತು ಅವರ ಸಾಮರ್ಥ್ಯ ಏನು ಎಂದು ಪಕ್ಷದ ಹೈಕಮಾಂಡ್ ನಮ್ಮನ್ನು ಕೇಳಬೇಕು ಮತ್ತು ನಂತರ ನೇಮಕಾತಿಗಳನ್ನು ಮಾಡಬೇಕು. ದೆಹಲಿಯಲ್ಲಿ ಕುಳಿತು ಪಕ್ಷದ ನಾಯಕರು ಸಿದ್ಧಪಡಿಸಿದ ಪಟ್ಟಿಯನ್ನು ಒಪ್ಪಿಕೊಳ್ಳಲು ನಾವು ಗುಲಾಮರೇ? ಅದು ಯಾವುದೇ ಜಿಲ್ಲೆಯಾಗಿರಬಹುದು. ನೇಮಕಾತಿ ಮಾಡುವ ಮೊದಲು ಆಯಾ ಜಿಲ್ಲೆಗಳ ಉಸ್ತುವಾರಿಗಳನ್ನು ಕೇಳಬೇಕು. ಅವರು ಕೇವಲ ಲಾಟರಿಯಂತೆ ನೇಮಕಾತಿಗಳನ್ನು ಮಾಡಿದರೆ ಕೇಳುವವರಾರು? ಅದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಹೈಕಮಾಂಡ್ ನಾಯಕರ ವಿರುದ್ಧ ಕಿಡಿಕಾರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT