ಲಕ್ಷ್ಮಣ್ ಸವದಿ 
ರಾಜಕೀಯ

ಬಿಜೆಪಿ ಸೇರ್ಪಡೆಯಾಗುವಂತೆ ಒತ್ತಡವಿದೆ, ಆದರೆ, ನಾನು ಬಿಜೆಪಿಗೆ ಹೋಗಲ್ಲ; ಲಕ್ಷ್ಮಣ್ ಸವದಿ

ಬಿಜೆಪಿ ಸೇರ್ಪಡೆಯಾಗುವಂತೆ ಒತ್ತಡವಿದೆ. ಆದರೆ, ನಾನು ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋಗಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ: ಬಿಜೆಪಿ ಸೇರ್ಪಡೆಯಾಗುವಂತೆ ಒತ್ತಡವಿದೆ. ಆದರೆ, ನಾನು ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋಗಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಜಗದೀಶ್ ಶೆಟ್ಟರ್ ಒಟ್ಟಿಗೆ ನಿರ್ಧಾರ ಮಾಡಿ ಕಾಂಗ್ರೇಸ್ ಗೆ ಪಕ್ಷಕ್ಕೆ ಸೇರ್ಪಡೆ ಆಗಿದ್ದಲ್ಲ. ನಾನು ಮೊದಲು ಬಂದೆ. ಟಿಕೆಟ್ ಸಿಗದ ಕಾರಣ ನಂತರ ಶೆಟ್ಟರ್ ಅವರು ಕಾಂಗ್ರೆಸ್‌ಗೆ ಬಂದರು. ಯಾಕೆ ಇದೀಗ ಬಿಜೆಪಿಗೆ ಹೋಗಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.

ನಾನು ಅವರು ಸ್ನೇಹಿತರು. ದಿನ ನಾವಿ‌ಬ್ಬರೂ ಮಾತನಾಡುತ್ತೇವೆ. ಆದರೆ ಅವರು ಈ ನಿರ್ಧಾರ ಮಾಡುತ್ತಾರೆಂದು ಗೊತ್ತಿರಲಿಲ್ಲ. ನಾನೂ ಕೂಡ ಶೆಟ್ಟರ್ ರೀತಿಯಲ್ಲೇ ಬಿಜೆಪಿ ಸೇರ್ಪಡೆಗೊಳ್ಳುತ್ತೇನೆಂಬುದು ಸುಳ್ಳು. ಅಥಣಿಯ ಜನರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನು ಅವರಿಗೆ ದ್ರೋಹ ಮಾಡುವುದಿಲ್ಲ ಎಂದು ತಿಳಿಸಿದರು.

ಬಿಜೆಪಿಗೆ ಸೇರ್ಪಡೆಯಾಗುವಂತೆ ಒತ್ತಡ ಬರುತ್ತಿರುವುದು ನಿಜ. ಲೋಕಸಭೆ ಚುನಾವಣಾ ಹಿನ್ನೆಲೆ ಅವರಿಗೆ (ಬಿಜೆಪಿ) ನಮ್ಮ ಅನಿರ್ವಾಯತೆ ಇದೆ. ಹಾಗಾಗಿ ಸಂಪರ್ಕ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿನ ಹಲವಾರು ಹಿರಿಯ ನಾಯಕರು ಮತ್ತು ಸ್ನೇಹಿತರು ನನ್ನನ್ನು ಪಕ್ಷಕ್ಕೆ ಮರಳುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ, ನನ್ನ ನಿರ್ಗಮನದ ಪರಿಣಾಮ ಏನು ಎಂಬುದು ಬಿಜೆಪಿ ಇದೀಗ ತಿಳಿದಿದೆ. ಹೀಗಾಗಿ ನಾನು ಪಕ್ಷಕ್ಕೆ ಮರಳಬೇಕೆಂದು ಬಯಸುತ್ತಿದ್ದಾರೆ. ಆದರೆ, ನಾನು ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ