ಮಾಜಿ ಸಿಎಂ ಬೊಮ್ಮಾಯಿ 
ರಾಜಕೀಯ

ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ

ಮಂಡ್ಯದಲ್ಲಿ ‘ಹನುಮಧ್ವಜ’ ತೆಗೆಯುವ ಮೂಲಕ ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಹಾವೇರಿ: ಮಂಡ್ಯದಲ್ಲಿ ‘ಹನುಮಧ್ವಜ’ ತೆಗೆಯುವ ಮೂಲಕ ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಅಕ್ರಮದಲ್ಲಿ ತೊಡಗಿದವರಿಗೆ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದರು.

ಪೊಲೀಸರ ಮೂಲಕ ಸರ್ಕಾರ ಪವಿತ್ರ ಧ್ವಜವನ್ನು ತೆಗೆಸಿದೆ. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಮಂತ್ರವನ್ನು ಸಿಎಂ ಸಿದ್ದರಾಮಯ್ಯ ಜಪಿಸುತ್ತಿರುವಾಗಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಳೆದ ವಾರ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಇಂತಹ ಅನೇಕ ಘಟನೆಗಳು ವರದಿಯಾಗಿವೆ. ಕೆಲವರನ್ನು ಬಂಧನಕ್ಕೊಳಪಡಿಸಲಾಗಿದೆ. ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದು, ಅನೈತಿಕ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ರಕ್ಷಿಸುತ್ತಿದೆ' ಎಂದು ಹೇಳಿದರು.

ದಲಿತರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಮಹಿಳೆಯರ ಮೇಲಿನ ದೌರ್ಜನ್ಯ ಶೇ.30ರಷ್ಟು ಹೆಚ್ಚಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT