ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್  
ರಾಜಕೀಯ

ಸಿಎಂ–ಡಿಸಿಎಂ ಹುದ್ದೆ ಫೈಟ್: ಉಪ ಚುನಾವಣೆ ಸಿದ್ಧತೆ ನಡುವಲ್ಲೇ 'ಕೈ' ಪಡೆಗೆ ಹೊಸ ತಲೆನೋವು!

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯವನ್ನು ಬಿಜೆಪಿ-ಜೆಡಿಎಸ್ ತನ್ನ ಲಾಭಕ್ಕೆ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ, ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಠಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಈಗ ಒಡೆದ ಮನೆಯಾಗಿದ್ದು, ಈ ಗೊಂದಲಗಳ ಕರಿನೆರಳು ಮುಂಬುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮೇಲೆ ಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯವನ್ನು ಬಿಜೆಪಿ-ಜೆಡಿಎಸ್ ತನ್ನ ಲಾಭಕ್ಕೆ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರನ್ನು ಸೋಲಿಸಲು ಸಿದ್ದರಾಮಯ್ಯ ಪಾತ್ರವಿದೆ ಎಂದು ಈಗಾಗಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಆರೋಪಿಸಿದ್ದಾರೆ.

ಸುರೇಶ್ ಸೋಲಿನಿಂದಾಗಿ ಕಾಂಗ್ರೆಸ್ ಕಾರ್ಯಕರ್ತರು ಈಗಾಗಲೇ ಹತಾಶರಾಗಿದ್ದು, ಇದೀಗ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಪಾಳಯದಲ್ಲಿ ಜಟಾಪಟಿ ಏರ್ಪಟ್ಟಿರುವುದರಿಂದ ಪಕ್ಷದೊಳಗೆ ಗೊಂದಲ ಉಂಟಾಗಿದೆ. ಇದು ಅವರ ಮನೋಸ್ಥೈರ್ಯವನ್ನು ಮತ್ತಷ್ಟು ಕುಗ್ಗಿಸುತ್ತದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.

ಶಿವಕುಮಾರ್ ಅಥವಾ ಸುರೇಶ್ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಿದರೆ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಮನಃಪೂರ್ವಕವಾಗಿ ತೊಡಗಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಇದಲ್ಲದೆ ಸಿಎಂ ಹಾಗೂ ಡಿಸಿಎಂ ತಿಕ್ಕಾಟವು ಶಿಗ್ಗಾಂವಿ ಉಪಚುನಾವಣೆ ಮೇಲೂ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮಂಗಳೂರು-ಉಡುಪಿ ಸ್ಥಳೀಯ ಸಂಸ್ಥೆಗಳಿಂದ ಎಂಎಲ್‌ಸಿ ಸ್ಥಾನಕ್ಕೆ ನಡೆದ ಉಪಚುನಾವಣೆಗೆ ಯಾವುದೇ ಅಲ್ಪಸಂಖ್ಯಾತ ಮುಖಂಡರನ್ನು ಸಮಿತಿಗೆ ಸೇರಿಸಿಕೊಳ್ಳದ ಕಾರಣ, ಅಲ್ಪಸಂಖ್ಯಾತರು ಈಗಾಗಲೇ ಡಿಕೆ.ಶಿವಕುಮಾರ್ ಅವರ ಮೇಲೆ ಅಸಮಧಾನಗೊಂಡಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ಉಸ್ತುವಾರಿ ಸಮಿತಿಯಲ್ಲಿ ಡಿಕೆಶಿಯವರಿಗೆ ಸ್ಥಾನಕ್ಕೆ ವಿರೋಧ ವ್ಯಕ್ತಪಡಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಆದರೆ, ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಇ.ತುಕಾರಾಂ ಗೆದ್ದಿದ್ದನ್ನು ಪಕ್ಷ ಗಂಭೀರವಾಗಿ ಪರಿಗಣಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT