ಕೆ.ಎನ್.ರಾಜಣ್ಣ 
ರಾಜಕೀಯ

ನಾಯಕತ್ವ ವಿಚಾರದಲ್ಲಿ ಗೊಂದಲ ಸೃಷ್ಟಿಸದಂತೆ ಹೈಕಮಾಂಡ್ ಸೂಚನೆ: ಸಚಿವ ಕೆ.ಎನ್. ರಾಜಣ್ಣ

'ನಾಯಕತ್ವ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳಲಿದೆ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಬೇಕು, ಈ ವಿಷಯಗಳಲ್ಲಿ ಯಾವುದೇ ಗೊಂದಲ ಇರಬಾರದು ಎಂದು ನಾನು ಭಾವಿಸುತ್ತೇನೆ'

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಹೇಳಿಕೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆದೇಶವನ್ನು ಬಹಿರಂಗವಾಗಿ ಧಿಕ್ಕರಿಸಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ, ನಾಯಕತ್ವ ಬದಲಾವಣೆ ಸಂಬಂಧದ ಹೇಳಿಕೆ ಮೂಲಕ ಗೊಂದಲ ಸೃಷ್ಟಿಸದಂತೆ ಹೈಕಮಾಂಡ್ ಸೂಚಿಸಿದೆ ಎಂದು ಸೋಮವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ, ''ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ, ಸಿಎಂ ಬದಲಾವಣೆ ಬಗ್ಗೆ ಯಾರೂ ಮಾತನಾಡಬಾರದು. ನಾಯಕತ್ವ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳಲಿದೆ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಬೇಕು, ಈ ವಿಷಯಗಳಲ್ಲಿ ಯಾವುದೇ ಗೊಂದಲ ಇರಬಾರದು ಎಂದು ನಾನು ಭಾವಿಸುತ್ತೇನೆ. ಎಲ್ಲೆಲ್ಲಿ ಬದಲಾವಣೆ ಬೇಕಿದೆಯೋ ಅಲ್ಲಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಬಿಂಬಿಸಿ ಅವರ ಹೆಸರಿನಲ್ಲಿ ಸಮಾವೇಶ ಆಯೋಜನೆ ಕುರಿತ ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಅಂತಹ ಯಾವುದೇ ಸಮಾವೇಶವನ್ನು ಯೋಜಿಸುತ್ತಿಲ್ಲ.ಅಂತಹ ವಿಚಾರಗಳನ್ನು ನಂತರ ಹಂಚಿಕೊಳ್ಳುತ್ತೇನೆ ಎಂದು ಹೇಳಿದರು.

ಡಿಸಿಎಂ ಶಿವಕುಮಾರ್ ಸ್ಥಾನವನ್ನು ದುರ್ಬಲಗೊಳಿಸಲು ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಸಚಿವ ರಾಜಣ್ಣ ತೀವ್ರವಾಗಿ ಒತ್ತಾಯಿಸಿದ್ದರು. ಹಾಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಅವಕಾಶ ಬಂದರೆ ದಲಿತ ಮುಖಂಡರೊಬ್ಬರನ್ನು ಸಿಎಂ ಸ್ಥಾನಕ್ಕೆ ತರುವುದಾಗಿಯೂ ಅವರು ಭರವಸೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT